February 3, 2026
Tuesday, February 3, 2026
spot_img

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ತೀವಿ : ಭೈರತಿ ಸುರೇಶ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಧಮ್ಕಿ ಹಾಕಿದ ಕೇಸ್‌ನಲ್ಲಿ ಕಾಂಗ್ರೆಸ್‌ ಸರ್ಕಾರ ರಾಜೀವ್‌ ಗೌಡನನ್ನು ರಕ್ಷಣೆ ಮಾಡಲ್ಲ. ಕಾನೂನು ಏನು ಹೇಳುತ್ತದೆಯೋ ಅದೇ ಆಗುತ್ತದೆ ಎಂದು ಸಚಿವ ಬೈರತಿ ಸುರೇಶ್‌ ಹೇಳಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಪ್ರಶ್ನೆ ಕೇಳಿದರು. ಪೌರಾಡಳಿತ ಇಲಾಖೆಯಲ್ಲಿ ಬ್ಯಾನರ್ ಹಾಕಲು ನಿಯಮ ಇದೆ. ಅನುಮತಿ ಪಡೆದು ಹಾಕಬಹುದು ಅಂತಿದೆ. ಶಿಡ್ಲಘಟ್ಟದಲ್ಲಿ ರಾಜೀವ್ ಗೌಡ ಅನ್ನೋರು ಮಹಿಳಾ ಅಧಿಕಾರಿಯನ್ನ ನಿಂದಿಸಿದ್ದಾರೆ. ಫೋನ್‌ನಲ್ಲಿ ಕೆಟ್ಟದಾಗಿ ಮಾತಾಡಿದ್ದಾರೆ.

ಆ ಅಧಿಕಾರಿ ಕಣ್ಣೀರು ಹಾಕಿದ್ದಾರೆ. ಮಹಿಳಾ ಅಧಿಕಾರಿ ವೈಯಕ್ತಿಕ ಕೇಸ್ ಹಾಕಿದ್ದಾರೆ. ಇದಕ್ಕೆ ರಾಜೀವ್ ಗೌಡ ಧಮ್ಕಿ ಹಾಕಿದ್ದಾರೆ. ಪೌರಾಡಳಿತ ಇಲಾಖೆಯಿಂದ ರಾಜೀವ್ ಗೌಡ ಮೇಲೆ ಕೇಸ್ ಹಾಕಬೇಕು. ಸೋಮವಾರ ರಾತ್ರಿ ಬಂಧನ ಆಗಿದೆ. ಮಹಿಳೆಯರಿಗೆ ಸಾರ್ವಜನಿಕ ಕ್ಷೇತ್ರದಲ್ಲಿ ರಕ್ಷಣೆ ಇಲ್ಲ. ಮಹಿಳಾ ಅಧಿಕಾರಿಗೆ ರಕ್ಷಣೆ ಇಲ್ಲ. ಪೊಲೀಸರು ಸರಿಯಾದ ಕೇಸ್ ಹಾಕಿಲ್ಲ. ಸಿಎಸ್ ಮಹಿಳೆ ಆದರೂ ನ್ಯಾಯ ಸಿಗ್ತಿಲ್ಲ ಈ ಬಗ್ಗೆ ಕ್ರಮ ಆಗಬೇಕು ಎಂದರು.

ಘಟನೆ ಆದ ಕೂಡಲೇ ಎಸ್ಪಿಗೆ ಸೂಚನೆ ಕೊಡಲಾಗಿದೆ. ಆಕೆಯೇ ದೂರು ಕೊಟ್ಟಿದ್ದಾರೆ. ಅದರ ಆಧಾರದಲ್ಲಿ ಕ್ರಮ ಆಗಿದೆ. ರಾಜೀವ್ ಗೌಡನನ್ನ ಬಂಧನ ಮಾಡಲಾಗಿದೆ. ಮಹಿಳಾ ಅಧಿಕಾರಿ ಸಹೋದರಿ ಸಮಾನ. ಎಸ್ಪಿ 3 ತಂಡ ಮಾಡಿ, ಹೊರರಾಜ್ಯದಲ್ಲಿ ಅರೆಸ್ಟ್ ಮಾಡಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !