ಹೊಸದಿಗಗಂತ ಡಿಜಿಟಲ್ ಡೆಸ್ಕ್
ಅಂತೂ ಕರಾವಳಿ ಭಾಗದಲ್ಲಿ ಇಂದಿನಿಂದ ಮುಂಗಾರು ಒಂದಿಷ್ಟು ಚುರುಕಾಗುವ ಲಕ್ಷಣ ಗೋಚರಿಸಿದೆ. ವಿಲಕ್ಷಣ ಮಾದರಿಯ ಮುಂಗಾರಿಗೆ ರಾಜ್ಯ ಸಾಕ್ಷಿಯಾಗುತ್ತಿದ್ದು, ಮಾರುತಗಳು ಮಧ್ಯಾಹ್ನದ ಬಳಿಕ, ಸಂಜೆ ಹಾಗೂ ರಾತ್ರಿ ಹೊತ್ತಿನಲ್ಲಿಯೇ ತೀವ್ರತೆ ಹೆಚ್ಚಿಸಿಕೊಳ್ಳುತ್ತಿರುವುದು ಈ ಬಾರಿಯ ಭಯಹುಟ್ಟಿಸುವ ಹೊಸ ಬೆಳವಣಿಗೆಯಾಗಿದೆ.
ಜೂ.19ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಸಂಜೆ ವೇಳೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಾಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೂಡಾ ಮಳೆಯ ಮುನ್ಸೂಚನೆ ಕಂಡುಬಂದಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ