ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಬೆನ್ನಲ್ಲೇ ‘ಪುಷ್ಪ 2’ ನಟಿ ರಶ್ಮಿಕಾ ಮಂದಣ್ಣ ರಿಯಾಕ್ಟ್ ಮಾಡಿದ್ದಾರೆ.
ಈ ಪರಿಸ್ಥಿತಿಯು ನಂಬಲಾಗದ ಆಘಾತವುಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನು ಏನು ನೋಡಿದೆನೋ ಅದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಈ ಘಟನೆ ನಡೆದಿದ್ದು, ನಿರೀಕ್ಷಿತವಾಗಿ. ಇದರ ಬಗ್ಗೆ ಬೇಸರವಿದೆ. ನಟ ಅನ್ನೋ ಒಂದೇ ಒಂದು ಕಾರಣಕ್ಕೆ ಆರೋಪ ಹೊರಿಸುವುದನ್ನು ನೋಡಿದರೆ ಬೇಸರವಾಗುತ್ತದೆ. ಈ ಪರಿಸ್ಥಿತಿಯು ನಂಬಲಾಗದ ಆಘಾತವುಂಟು ಮಾಡಿದೆ ಎಂದು ರಶ್ಮಿಕಾ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.