ಜೈಲಿನಲ್ಲಿ ಒಂದು ರಾತ್ರಿ ಕಳೆದ ನಟ, ಇಂದು ಮುಂಜಾನೆಯೇ ಅಲ್ಲು ಅರ್ಜುನ್‌ ರಿಲೀಸ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಧ್ಯಾ ಥಿಯೇಟರ್ ಘಟನೆಯಲ್ಲಿ ಮಧ್ಯಂತರ ಜಾಮೀನು ಪಡೆದ ನಂತರ ನಟ ಅಲ್ಲು ಅರ್ಜುನ್ ಇಂದು ಬೆಳಿಗ್ಗೆ ಜೈಲಿನಲ್ಲಿ ಒಂದು ರಾತ್ರಿ ಕಳೆದ ನಂತರ ಹೈದರಾಬಾದ್ ಕೇಂದ್ರ ಕಾರಾಗೃಹದಿಂದ ಹೊರನಡೆದರು.

ನಟ ಅಲ್ಲು ಅರ್ಜುನ್ ಅವರನ್ನು ತೆಲಂಗಾಣದ ಕೆಳ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ತೀರ್ಪನ್ನು ತೆಲಂಗಾಣ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದ್ದು, 50,000 ಬಾಂಡ್ ಅನ್ನು ಒದಗಿಸಿದ ಮೇಲೆ ಅವರಿಗೆ ಜಾಮೀನು ನೀಡಿದೆ. ಆದರೆ, ನಟ ಜೈಲಿನಲ್ಲಿ ರಾತ್ರಿ ಕಳೆಯಬೇಕಾಗಿ ಬಂದಿದ್ದು, ಇಂದು ಬೆಳಗ್ಗೆ ಬಿಡುಗಡೆಯಾಗಿದ್ದಾರೆ.

ಬಿಡುಗಡೆಗೂ ಮುನ್ನ ಹೈದರಾಬಾದ್‌ನ ಚಂಚಲಗುಡ ಕೇಂದ್ರ ಕಾರಾಗೃಹದ ಹೊರಗೆ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು. ಜಾಮೀನು ಸಿಕ್ಕರೂ ನಟನನ್ನು ರಾತ್ರಿ ಹೊರಗೆ ಬರಲು ಬಿಡದಿರುವ ಬಗ್ಗೆ ಅಲ್ಲು ಅರ್ಜುನ್ ಪರ ವಕೀಲ ಅಶೋಕ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.

ಡಿಸೆಂಬರ್ 4 ರಂದು ಸಂಧ್ಯಾ ಥಿಯೇಟರ್ ಘಟನೆ ನಡೆದಿದ್ದು, ಅಲ್ಲು ಅರ್ಜುನ್ ತಮ್ಮ ಹೊಸ ಚಿತ್ರ ಪುಷ್ಪ 2 ರ ಪ್ರದರ್ಶನಕ್ಕಾಗಿ ಹೈದರಾಬಾದ್‌ನ ಥಿಯೇಟರ್‌ಗೆ ಭೇಟಿ ನೀಡಿದಾಗ ನೂಕುನುಗ್ಗಲಿನಿಂದ ಕಾಲ್ತುಳಿತಕ್ಕೆ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್‌ ಬಂಧನಕ್ಕೊಳಗಾಗಿದ್ದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!