ನಟ ದರ್ಶನ್ ಮತ್ತೆ ಅರೆಸ್ಟ್: ಪತ್ನಿ ವಿಜಯಲಕ್ಷ್ಮೀ ಮೊದಲ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ಮತ್ತೆ ಅರೆಸ್ಟ್ ಆಗಿದ್ದಾರೆ. ಇದರ ಬೆನ್ನಲ್ಲೇ ವಿಜಯಲಕ್ಷ್ಮೀ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಮನಸ್ಸು ಒಡೆದಿದೆ ಎಂದು ಹೇಳಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ವೈರಲ್ ಆಗುತ್ತಿದೆ.

ನಟ ದರ್ಶನ್ ಮೊದಲ ಬಾರಿ ಬಂಧನದ ಬಳಿಕವೂ ಸೈಲೆಂಟ್ ಆಗಿಯೇ ಇದ್ದರು ವಿಜಯಲಕ್ಷ್ಮೀ. ದರ್ಶನ್ ಜಾಮೀನು ಪಡೆದು ಬಿಡುಗಡೆ ಆದ ಬಳಿಕ ಖುಷಿಪಟ್ಟವರು, ಮತ್ತೊಬ್ಬರು ಇದೀಗ ದರ್ಶನ್ ಈಗ ಮತ್ತೆ ಅರೆಸ್ಟ್ ಆಗಿರೋದು ಬೇಸರ ಮೂಡಿಸಿದೆ.

ಪೋಸ್ಟ್​ನಲ್ಲಿ ಅವರು ದರ್ಶನ್ ಬ್ಯಾಕ್ ಪೋಸ್​ನ ಫೋಟೋ ಹಾಕಿದ್ದಾರೆ. ದರ್ಶನ್ ಸರಳಿನ ಹಿಂದೆ ನಿಂತು ಏನನ್ನೋ ನೋಡುತ್ತಿದ್ದಾರೆ. ಈ ಪೋಸ್ಟ್​ಗೆ ಅವರು ಒಡೆದ ಹೃದಯದ ಎಮೋಜಿ ಹಾಕಿದ್ದಾರೆ. ಎಲ್ಲವನ್ನೂ ಅವರು ಸೂಕ್ಷ್ಮವಾಗಿ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!