ನಟ ದರ್ಶನ್‌ಗೆ ಮತ್ತೆ ಜೈಲೇ ಗತಿ, ನ್ಯಾಯಾಂಗ ಬಂಧನ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಕೋರ್ಟ್​, ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ. ಜುಲೈ 18 ರವರೆಗೆ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನ ಪ್ರಕರಣದ ಎ2 ಆರೋಪಿ ದರ್ಶನ್ ಹಾಗೂ ಇತರೆ ಕೆಲ ಆರೋಪಿಗಳು ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೋರ್ಟ್​ಗೆ ಹಾಜರಾಗಿದ್ದರು. ಬೆಂಗಳೂರು ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನ ಹಾಜರುಪಡಿಸಲಾಗಿತ್ತು.

ಮಹಿಳಾ ಎ1 ಆರೋಪಿ ಪವಿತ್ರಾ ಗೌಡ ಪ್ರತ್ಯೇಕವಾಗಿ ಕೋರ್ಟ್​​ಗೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್​ ಜುಲೈ 18ರವರೆಗೆ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಂದರೆ ಇನ್ನು 14 ದಿನಗಳ ಕಾಲ ದರ್ಶನ್ ಅವರು ಜೈಲಿನಲ್ಲೇ ಇರಬೇಕಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!