ಹೊಸದಿಗಂತ ಡಿಜಿಟಲ್ ಡೆಸ್ಕ್:
ದರ್ಶನ್ ಮೈಸೂರಿಗೆ ತೆರಳಲು ಹಾಗೂ ಪವಿತ್ರ ಗೌಡ ಹೊರ ರಾಜ್ಯಕ್ಕೆ ಹೋಗಲು ಕೋರ್ಟ್ ಅನುಮತಿ ನೀಡಿದೆ.
57ನೇ ಸಿಸಿಎಚ್ ನ್ಯಾಯಾಧೀಶರ ಮುಂದೆ ದರ್ಶನ್ ಪರ ವಕೀಲರು ಮೈಸೂರಿಗೆ ತೆರಳಲು ಅನುಮತಿ ಕೋರಿದ್ದರು. ಪವಿತ್ರಾ ಗೌಡ ವಕೀಲರು ಹೊರ ರಾಜ್ಯಕ್ಕೆ ಹೋಗಲು ಅನುಮತಿ ಕೋರಿದ್ದರು.
ಈ ಎರಡು ಅರ್ಜಿಗಳನ್ನು ನ್ಯಾಯಾಲಯ ಸ್ವೀಕರಿಸಿದೆ. ಜನವರಿ 12ರಿಂದ 17ರವರೆಗೆ ಮೈಸೂರಿನಲ್ಲಿ ದರ್ಶನ್ ಗೆ ಅವಕಾಶ ನೀಡಲಾಗಿದ್ದು, ಈ ಬಾರಿ ಮೈಸೂರಿನಲ್ಲಿ ದರ್ಶನ್ ಸಂಕ್ರಾಂತಿ ಆಚರಿಸಲಿದ್ದಾರೆ.
ಪವಿತ್ರಾ ಗೌಡಗೆ ಮುಂಬೈ ಮತ್ತು ದೆಹಲಿಗೆ ತೆರಳಲು ಕೋರ್ಟ್ ಅನುಮತಿ ನೀಡಿದೆ. ದೇವಸ್ಥಾನ ಮತ್ತು ವ್ಯವಹಾರ ಸಂಬಂಧ ಒಂದು ತಿಂಗಳ ಕಾಲ ಹೊರ ರಾಜ್ಯಕ್ಕೆ ತೆರಳಲು ಅನುಮತಿ ನೀಡಿದೆ.