ಇಂದು ನಟ ದರ್ಶನ್ ಗೆ ಶಸ್ತ್ರಚಿಕಿತ್ಸೆ: ‘ಬಾಸ್’ ಗುಣಮುಖರಾಗಲೆಂದು ಅಭಿಮಾನಿಗಳ ಪ್ರಾರ್ಥನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ದರ್ಶನ್ ಇತ್ತೀಚೆಗಷ್ಟೇ ಅವರ ಎಡಗೈಗೆ ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಗೆ ದಾಖಲಾಗಿದ್ದು, ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ವರದಿಯಾಗಿದೆ.

ಗಾಯಗೊಂಡಿರುವ ಕೈಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಲಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ. ಬಾಸ್ ಪರವಾಗಿ ವಿಶೇಷ ಪೂಜೆ ಮತ್ತು ಅಭಿಷೇಕಗಳನ್ನು ಮಾಡುವ ಮೂಲಕ ಡಿ ಬಾಸ್ ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

‘ಡೆವಿಲ್’ ಚಿತ್ರೀಕರಣದ ವೇಳೆ ಕೈಗೆ ಗಂಭೀರ ಗಾಯವಾಗಿದ್ದ ಕಾರಣ, ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!