ನಟ ದರ್ಶನ್ ಗೆ ಸೀಜ್ ಆದ 40 ಲಕ್ಷ ಸಂಕಷ್ಟ: ಹಣ ವಾಪಸ್ ಕೊಡಿಸುವಂತೆ ಕೋರ್ಟ್‌ಗೆ ಅರ್ಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸೀಜ್ ಮಾಡಿದ್ದ 40.40 ಲಕ್ಷ ರೂ. ಹಣವನ್ನು ವಾಪಸ್ ಕೊಡಿಸುವಂತೆ ಕೋರ್ಟ್‌ಗೆ ನಟ ದರ್ಶನ್‌ ಅರ್ಜಿ ಸಲ್ಲಿಕೆ ಮಾಡಿದ್ದಾರೆ..

ಈ ಸಂಬಂಧ 57ನೇ ಸೆಷನ್ಸ್ ಕೋರ್ಟ್‌ಗೆ ದರ್ಶನ್ ಹಾಗೂ ಪ್ರದೂಷ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ದರ್ಶನ್ ಪ್ರದೂಷ್ ಹಾಗೂ ವಿಜಯಲಕ್ಷ್ಮಿ ಅವರಿಂದ ಹಣ ವಶಕ್ಕೆ ಪಡೆಯಲಾಗಿತ್ತು. ರೇಣುಕಾಸ್ವಾಮಿ ಕೊಲೆ ಕೇಸಿನ ಸಾಕ್ಷ್ಯ ನಾಶಕ್ಕಾಗಿ ಹಣ ಸಂಗ್ರಹ ಮಾಡಿರುವ ಆರೋಪ ಹೊರಿಸಲಾಗಿತ್ತು.

ತುರ್ತಾಗಿ ಹಣ ಬೇಕಿದ್ದು, ಪೊಲೀಸರು ಸೀಜ್ ಮಾಡಿರುವ ಹಣ ಬಿಡುಗಡೆಗೆ ಸೂಚಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಪಿಪಿಗೆ ಕೋರ್ಟ್ ಸೂಚನೆ ನೀಡಿದೆ. ಈ ಮಧ್ಯೆ, ಸೀಜ್‌ ಆದ ಹಣದ ತನಿಖೆ ಅಗತ್ಯವಿದ್ದು, ತಮ್ಮ ವಶಕ್ಕೆ ನೀಡವಂತೆ ಐಟಿ ಅರ್ಜಿ ಸಲ್ಲಿಕೆ ಮಾಡಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!