ಮೈಸೂರಲ್ಲಿ ತೆಲುಗು ಸಿನಿಮಾ ಶೂಟಿಂಗ್‌ ವೇಳೆ ಅವಘಡ: ನಟ ಗೋಪಿಚಂದ್ ಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೈಸೂರಿನಲ್ಲಿ ಟಾಲಿವುಡ್ ನಟ ಗೋಪಿಚಂದ್ ತಮ್ಮ ಮುಂದಿನ ಚಿತ್ರದ ಚಿತ್ರೀಕರಣವನ್ನ ನಡೆಸುತ್ತಿದ್ದು, ಶೂಟಿಂಗ್‌ ವೇಳೆ ನಿಯಂತ್ರಣ ತಪ್ಪಿ ಕಾಲು ಜಾರಿದ ಬಿದ್ದಿರುವ ಘಟನೆ ನಡೆದಿದೆ.
ಈ ಕುರಿತು ಚಲನಚಿತ್ರ ಘಟಕ ಪ್ರತಿಕ್ರಿಯಿಸಿದ್ದು, ನಟ ಗೋಪಿಚಂದ್ ಚೆನ್ನಾಗಿದ್ದಾರೆ. ಘಟನೆಯ ಬಗ್ಗೆ ಚಿಂತಿಸಬೇಡಿ ಎಂದುಅವರು ಅಭಿಮಾನಿಗಳು ಮತ್ತು ಸ್ನೇಹಿತರಿಗೆ ವಿನಂತಿಸಿದೆ.
ಇನ್ನು ಚಿತ್ರದ ಚಿತ್ರೀಕರಣವು ಇಂದು ಸ್ಥಗಿತಗೊಂಡಿದೆ.
ಈ ಚಿತ್ರ ಶ್ರೀವಾಸ್ ನಿರ್ದೇಶನದಲ್ಲಿ ಮೂಡಿ ಬರ್ತಿದ್ದು, ನಾಯಕಿಯಾಗಿ ಹಯಾತಿ ಮತ್ತು ಜಗಪತಿ ಬಾಬು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!