ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನವರಸ ನಾಯಕ ಜಗ್ಗೇಶ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆ ಕೇದರನಾಥ್ ಮತ್ತು ಬದ್ರಿನಾಥ್ ಯಾತ್ರೆಗೆ ಜಗ್ಗೇಶ್ ಅವರು ತೆರಳಿದ್ದರು.
ಈ ವೇಳೆ, ಅಲ್ಲಿ ಬೆಟ್ಟ ಹತ್ತಿ ಇಳಿದ ಕಾರಣ ಹಾಗೂ ಸತತ ನಡೆದಾಟದ ಕಾರಣದಿಂದಾಗಿ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ವೈದ್ಯರ ಸಲಹೆ ಮೇರೆಗೆ ದೆಹಲಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ಗೆ ಒಳಗಾಗಿದ್ದಾರೆ. ಇಂದು ಮಧ್ಯರಾತ್ರಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.
ತಾವು ಸಿಟಿ ಸ್ಕ್ಯಾನ್ಗೆ ಒಳಗಾಗುತ್ತಿರುವ ಚಿತ್ರವನ್ನು ಎಕ್ಸ್ನಲ್ಲಿ ಹಂಚಿಕೊಂಡಿರುವ ನಟ ಜಗ್ಗೇಶ್, “L4L5 compression ಆಗಿ ನಡೆದಾಡಲು ಕಷ್ಟವಾಗಿ ಯಾವ ಕಾರ್ಯದಲ್ಲೂ ಭಾಗಿಯಾಗಲು ಸಾಧ್ಯವಾಗಲಿಲ್ಲ! 2ವಾರ ಫಿಸಿಯೋ ಚಿಕಿತ್ಸೆ ಹಾಗೂ ಬೆಡ್ರೆಸ್ಟ್ ಕಡ್ಡಾಯ ಎಂದು ವೈದ್ಯರು ಸಲಹೆ ನೀಡಿದ್ದಾರೆ. ನಿಮ್ಮ ಮಾಹಿತಿಗಾಗಿ ಧನ್ಯವಾದ ಶುಭಸಂಜೆ” ಎಂದು ಬರೆದುಕೊಂಡಿದ್ದಾರೆ.
L4L5 compression ಆಗಿ ನಡೆದಾಡಲು ಕಷ್ಟವಾಗಿ ಯಾವ ಕಾರ್ಯದಲ್ಲು ಭಾಗಿಯಾಗಲು ಸಾಧ್ಯವಾಗಲಿಲ್ಲಾ!
2ವಾರ pysiyo ಚಿಕಿತ್ಸೆ ಹಾಗು bedrest ಕಡ್ಡಾಯ ಎಂದು ಡಾ ಸಲಹೆ ನೀಡಿದ್ದಾರೆ..
ನಿಮ್ಮ ಮಾಹಿತಿಗಾಗಿ ಧನ್ಯವಾದ
ಶುಭಸಂಜೆ🙏 pic.twitter.com/KZgGvVffj6— ನವರಸನಾಯಕ ಜಗ್ಗೇಶ್ (@Jaggesh2) September 29, 2023
ಕಾವೇರಿ ಹೋರಾಟಕ್ಕೆ ಗೈರು: ಇಂದು ರಾಜ್ಯದೆಲ್ಲೆಡೆ ವಿವಿಧ ಸಂಘಟನೆಗಳಿಂದ ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್ಗೆ ಚಿತ್ರರಂಗ ಕೂಡ ಬೆಂಬಲ ನೀಡಿದೆ. ಆದರೆ, ಸದಾ ಇಂತಹ ವಿಚಾರಗಳಲ್ಲಿ ಅನ್ನದಾತರ ಪರವಾಗಿ ನಿಲ್ಲುವ ನಟ ಜಗ್ಗೇಶ್ ಅವರು ಅನಾರೋಗ್ಯದ ನಿಮಿತ್ತ ಕಾವೇರಿ ಹೋರಾಟಕ್ಕೆ ಗೈರಾಗಿದ್ದರು.