ನಟ ಕಮಲ್ ಹಾಸನ್ ಕ್ಷಮೆ ಕೇಳಬೇಕು…ಇಲ್ಲವೇ ಕರ್ನಾಟಕ ಬಂದ್ ಮಾಡುತ್ತೇವೆ: ವಾಟಾಳ್ ನಾಗರಾಜ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡದ ಬಗ್ಗೆ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಕ್ಷಮೆ ಕೇಳಬೇಕು. ಇಲ್ಲದೇ ಹೋದರೇ ಕ್ಷಮೆಗೆ ಆಗ್ರಹಿಸಿ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗುತ್ತದೆ. ಈ ಬಗ್ಗೆ ಎಲ್ಲಾ ಸಂಘಟನೆಗಳ ಜೊತೆಗೆ ಮಾತನಾಡಿ ಬೆಂಬಲ ಕೇಳುತ್ತೇವೆ ಎಂದರು.

ಕಮಲ್ ಹಾಸನ್ ಚಿತ್ರ ಬಿಡುಗಡೆ ಆದ್ರೇ ಕರ್ನಾಟಕ ರಣರಂಗವಾಗುತ್ತೆ. ಜಿಲ್ಲಾ, ತಾಲ್ಲೂಕುಗಳಲ್ಲಿಯೂ ಹೋರಾಟಗಾರರು ಸಜ್ಜಾಗಬೇಕು. ಜೈಲಿಗೆ ಹೋಗೋದಕ್ಕೂ ಎಲ್ಲಾ ಹೋರಾಟಗಾರರು ಸಜ್ಜಾಗಿ ಎಂದರು.

ನಟ ಕಮಲ್ ಹಾಸನ್ ಒಬ್ಬ ಅವಿವೇಕಿ. ಅಯೋಗ್ಯ. ಮೂರ್ಖ. ರಾಜ್ಯ ಸರ್ಕಾರ ತುರ್ತಾಗಿ ವಿಶೇಷ ಅಧಿವೇಶನ ಕರೆಯಬೇಕು. ಕನ್ನಡಕ್ಕೆ ಆಗುತ್ತಿರುವ ಅವಮಾನದ ಬಗ್ಗೆ ಚರ್ಚೆಯಾಗಬೇಕು ಎಂದು ಆಗ್ರಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!