ಮುರುಗೇಶ್ ನಿರಾಣಿ ಪರ ಬೃಹತ್ ರೋಡ್ ಶೋ ನಡೆಸಿದ ನಟ ಕಿಚ್ಚ ಸುದೀಪ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಚುನಾವಣಾ ಅಖಾಡದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿರುವ ನಟ ಕಿಚ್ಚ ಸುದೀಪ್ ಇಂದು ಬೀಳಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುರುಗೇಶ್ ಆರ್. ನಿರಾಣಿ ಅವರ ಪರ ಬೃಹತ್ ರೋಡ್ ಶೋ ನಡೆಸಿದರು.

ಇಲ್ಲಿನ ನಗರದ ಶಿವಾಜಿ ಸರ್ಕಲ್ ನಿಂದ ಆರಂಭವಾದ ಬೃಹತ್ ರೋಡ್ ಶೋ ಬಸವೇಶ್ವರ ಸರ್ಕಲ್,‌ ಡಾ. ಅಂಬೇಡ್ಕರ್ ಸರ್ಕಲ್ ಮಾರ್ಗವಾಗಿ‌ ಸಾಗಿ ಮುಂದೆ ಗಾಂಧಿ ನಗರದಲ್ಲಿ ಕೊನೆಗೊಂಡಿತು.

ಈ ಕ್ಷಣ ಸುದೀಪ್ ಅವರನ್ನು ಕಣ್ತುಂಬಿಕೊಳ್ಳಲು ಹಾಗೂ ನಿರಾಣಿ ಅವರನ್ನು ಬೆಂಬಲಿಸಿ ಕ್ಷೇತ್ರದ ಮೂಲೆ ಮೂಲೆಗಳಿಂದ ಸಹಸ್ರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಗಮಿಸಿದರು.

ಸುದೀಪ್ ಅವರು ನೆರೆದಿದ್ದ ಜನ ಸಾಗರವನ್ನು ಉದ್ದೇಶಿಸಿ ಮಾತನಾಡಿ, ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿ, ಅಭಿವೃದ್ಧಿಯ ಹರಿಕಾರ ನಿರಾಣಿ ಅವರಿಗೆ ಮತ ನೀಡುವಂತೆ ಕೇಳಿಕೊಂಡರು.

ಈ ಸಂದರ್ಭ ಬಿಜೆಪಿ ಎಸ್.ಸಿ. ಮೋರ್ಚಾ ರಾಜಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಚುನಾಯಿತ ಜನ ಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಕಿಚ್ಚನ ಅಭಿಮಾನಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!