ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ನಾಗಭೂಷಣ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಟಿಒ ವರದಿ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆ ಪೊಲೀಸರ ಕೈ ಸೇರಿದೆ.
ಅಪಘಾತದ ಕುರಿತಾಗಿ ಪರಿಶೀಲನೆ ನಡೆಸಿದ ಆರ್ಟಿಒ ಅಧಿಕಾರಿಗಳು ಸಂಪೂರ್ಣ ವರದಿಯನ್ನು ಪೊಲೀಸರಿಗೆ ಸಲ್ಲಿಸಿದ್ದಾರೆ.
ವರದಿಯ ಬಳಿಕ ಪೊಲೀಸರು ಕ್ರಮ ಕೈಗೊಂಡಿದ್ದು.ಮತ್ತೆ ನಟ ನಾಗಭೂಷಣ್ ಅವರನ್ನು ವಿಚಾರಣೆಗೆ ಕರೆಸಲು ನಿರ್ಧರಿಸಿದ್ದಾರೆ.
ಸೆ.30ರಂದು ರಾತ್ರಿ ಕನಕಪುರ ರಸ್ತೆಯಲ್ಲಿ ನಟ ನಾಗಭೂಷಣ್ ಕಾರು ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ದಂಪತಿಗೆ ಡಿಕ್ಕಿ ಹೊಡೆದಿತ್ತು. ಇದರ ಪರಿಣಾಮ ಮಹಿಳೆ ಸಾವನ್ನಪ್ಪಿದ್ದರು. ಮಹಿಳೆಯ ಪತಿ ಕೃಷ್ಣ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಗಭೂಷಣ್ ವಿರುದ್ಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.