ನಟ ಸಲ್ಮಾನ್ ಖಾನ್ ಗೆ ಬಂದ ಜೀವ ಬೆದರಿಕೆ ಪತ್ರದಲ್ಲಿ ತನ್ನ ಪಾತ್ರ ಇಲ್ಲ: ಗ್ಯಾಂಗ್​ಸ್ಟರ್​ ಬಿಷ್ಣೋಯಿ

ಹೊಸದಿಗಂತ ದಿಜಿಟಲ್‌ ಡೆಸ್ಕ್‌

ಬಾಲಿವುಡ್​ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಬಂದ ಜೀವ ಬೆದರಿಕೆ ಪತ್ರದಲ್ಲಿ ತನ್ನ ಯಾವುದೇ ಪಾತ್ರ ಇಲ್ಲ ಎಂದು ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯಿ ನಿರಾಕರಿಸಿದ್ದಾನೆ.
ಭಾನುವಾರ ನಟ ಸಲ್ಮಾನ್ ಮತ್ತು ಅವರ ತಂದೆ ಇಬ್ಬರನ್ನೂ ಹತ್ಯೆ ಮಾಡಲಾಗುವುದು ಎಂಬ ಅನಾಮಧೇಯ ಬೆದರಿಕೆ ಪತ್ರ ಬಂದಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯಿಯನ್ನು ಮಂಗಳವಾರ ದೆಹಲಿ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ದೆಹಲಿ ಪೊಲೀಸರ ಪ್ರಕಾರ, ಈ ವಿಷಯಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಮತ್ತು ಆ ಪತ್ರವನ್ನು ಯಾರು ಕಳುಹಿಸಿದ್ದಾರೆ ಎಂದು ನನಗೆ ಗೊತ್ತಿಲ್ಲ ಎಂದು ಬಿಷ್ಣೋಯಿ ಹೇಳಿದ್ದಾನೆ. ಈ ನಡುವೆ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಅವರಿಗೆ ಭದ್ರತೆ ಹೆಚ್ಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!