ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ .
ಲೋಕಸಭೆ ಚುನಾವಣೆ ಹಿನ್ನೆಲೆ ಪತ್ನಿ ಗೀತಾ ಪರ ಸತತವಾಗಿ ಪ್ರಚಾರ ಕೈಗೊಂಡ ಹಿನ್ನೆಲೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .
ಸಂಜೆ ವೇಳೆಗೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.