ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುರಾಣ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಡಾ. ಶಿವರಾಜ್ ಕುಮಾರ್ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು.
ಈ ಸಂದರ್ಭ ಪತ್ನಿ ಗೀತಾ ಶಿವರಾಜ್ಕುಮಾರ್ ಜೊತೆಗಿದ್ದರು. ದೇವಸ್ಥಾನದ ಆಡಳಿತದ ವತಿಯಿಂದ ಶಿವರಾಜ್ ಕುಮಾರ್ ದಂಪತಿಗೆ ಆತ್ಮೀಯ ಸ್ವಾಗತ ನೀಡಲಾಯಿತು.
ಶ್ರೀ ದೇವರದ ದರುಶನದ ಬಳಿಕ ನಟ ಶಿವರಾಜ್ ಕುಮಾರ್ ಅಭಿಮಾನಿಗಳೊಂದಿಗೆ ಕೆಲಕಾಲ ಜೊತೆಯಾದರು.



