ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕನ್ನಡ ನಟ ಶ್ರೀಮುರಳಿ ಶೂಟಿಂಗ್ ವೇಳೆ ಅವರಿಗೆ ಮೊಣಕಾಲಿಗೆ ಪೆಟ್ಟು ಬಿದ್ದ ಕಾರಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.
ಬಳಿಕ ಮತ್ತೆ ಶೂಟಿಂಗ್ ನಲ್ಲೂ ಪಾಲ್ಗೊಂಡಿದ್ದರು. ಆದ್ರೆ ಮೊಣಕಾಲು ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ವೈದ್ಯರ ಸಲಹೆ ಮೇರೆಗೆ ಇದೀಗ ಶಸ್ತ್ರ ಚಿಕಿತ್ಸೆಗೆ ಅವರು ಒಳಗಾಗಿದ್ದಾರೆ.
ನಿನ್ನೆ ಬೆಳಿಗ್ಗೆ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಡಾ.ಶಂಕರ್ ಮತ್ತು ವೈದ್ಯರ ತಂಡ ಯಶಸ್ಸಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಎರಡು ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ತಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೇ, ಮೂರು ತಿಂಗಳ ಕಾಲ ಡ್ಯಾನ್ಸ್ ಹಾಗೂ ಫೈಟ್ ಮಾಡದಂತೆ ಸೂಚನೆ ಕೂಡ ನೀಡಿದ್ದಾರೆ. ಸ್ವಲ್ಪ ದಿನಗಳ ನಂತರ ವಾಕಿಂಗ್ ಮಾಡಲು ಕೂಡ ಹೇಳಿದ್ದಾರೆ.
ಬಘೀರ ಸಿನಿಮಾದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆದಿತ್ತು. ಇದೇ ವೇಳೆ ಶ್ರೀಮುರಳಿ ಮೊಣಕಾಲಿಗೆ ಏಟು ಮಾಡಿಕೊಂಡಿದ್ದರು.