ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅವರ ತಾಯಿ ವಿಧಿವಶರಾಗಿ ಇಂದಿಗೆ ಮೂರು ದಿನಗಳಾಗಿದೆ. ಈ ಹಿನ್ನೆಲೆ ಕಾವೇರಿ ನದಿಯಲ್ಲಿ ತಾಯಿ ಸರೋಜಾ ಅಸ್ತಿಯನ್ನು ಸುದೀಪ್ ವಿಸರ್ಜನೆ ಮಾಡಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗೋಸಾಯಿಘಾಟ್ ಬಳಿಯ ಕಾವೇರಿ ನದಿಯಲ್ಲಿ ಸರೋಜಮ್ಮನ ಅಸ್ತಿ ವಿಸರ್ಜಿಸಿ ಸದ್ಗತಿಗಾಗಿ ಸುದೀಪ್ ಪ್ರಾರ್ಥಿಸಿದ್ದಾರೆ.
ವಿಧಿ ವಿಧಾನ ಕಾರ್ಯದಲ್ಲಿ ಕುಟುಂಬಸ್ಥರು ಮಾತ್ರ ಭಾಗಿಯಾಗಿದ್ದಾರೆ. ಅಸ್ತಿ ವಿಸರ್ಜನೆ ಕಾರ್ಯ ಚಿತ್ರೀಕರಿಸದಂತೆ ಮಾಧ್ಯಮಗಳಿಗೆ ಸುದೀಪ್ ಮನವಿ ಮಾಡಿದ್ದರು. ಅಸ್ತಿ ವಿಸರ್ಜನೆ ವೇಳೆ ಸುದೀಪ್ ಕಣ್ಣೀರಿಟ್ಟಿದ್ದಾರೆ. ವಿಧಿ ವಿಧಾನ ಕಾರ್ಯದ ಬಳಿಕ ಬೆಂಗಳೂರಿನತ್ತ ಸುದೀಪ್ ತೆರಳಿದ್ದಾರೆ.