ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ತಾರಕರತ್ನ ನಿನ್ನೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಅವರನ್ನು ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ತಡರಾತ್ರಿ ಕುಟುಂಬ ಸದಸ್ಯರು ವಿಶೇಷ ಆಂಬ್ಯುಲೆನ್ಸ್ನಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದೀಗ ತಾರಕರತ್ನ ಅವರಿಗೆ ನಾರಾಯಣ ಹೃದಯಾಲಯ ಆಸ್ಪತ್ರೆಯ ವೈದ್ಯಕೀಯ ತಂಡ ಚಿಕಿತ್ಸೆ ನೀಡುತ್ತಿದ್ದು, ಐಸಿಯುನಲ್ಲಿ ನಿಗಾ ಇರಿಸಲಾಗಿದೆ. ತಾರಕರತ್ನ ಆರೋಗ್ಯ ಸ್ಥಿತಿಯ ಬಗ್ಗೆ ನಂದಮೂರಿ ಬಾಲಕೃಷ್ಣ ವೈದ್ಯರಿಂದ ಮಾಹಿತಿ ಪಡೆಯುತ್ತಿದ್ದಾರೆ.
ಇದಕ್ಕೂ ಮುನ್ನ ಕುಪ್ಪಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾರಕರತ್ನ ಅವರನ್ನು ನೋಡಿ ಪತ್ನಿ ಅಲೇಖ್ಯಾ ರೆಡ್ಡಿ ಹಾಗೂ ಪುತ್ರಿ ನಿಶಿಕಾ ಕಣ್ಣೀರಿಟ್ಟರು. ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ತಾರಕರತ್ನ ಆರೋಗ್ಯ ಸ್ಥಿತಿಯನ್ನು ನಂದಮೂರಿ ಬಾಲಕೃಷ್ಣ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಕುಪ್ಪಂನ ಪಿಇಸಿ ಆಸ್ಪತ್ರೆ ವೈದ್ಯರು ಮೊದಲಿಗೆ ತಾರಕರತ್ನ ಅವರ ಎಡಭಾಗದ ಹೃದಯದ ಗೋಡೆ ಶೇ.90ರಷ್ಟು ಬ್ಲಾಕ್ ಆಗಿದ್ದು, ಉತ್ತಮ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚಿಸಿದರು.
ಪಿಇಸಿ ಆಸ್ಪತ್ರೆಯ ವೈದ್ಯರು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಯ ಅಧ್ಯಕ್ಷ ದೇವಿಶೆಟ್ಟಿ ಅವರನ್ನು ಸಂಪರ್ಕಿಸಿ ಇಲ್ಲಿಂದಲೇ ಅತ್ಯಾಧುನಿಕ ಸೌಲಭ್ಯಗಳಿರುವ ವಿಶೇಷ ಆಂಬ್ಯುಲೆನ್ಸ್ ಕಳಿಸಲಾಗಿತ್ತು. ಆ ಆಂಬ್ಯುಲೆನ್ಸ್ನಲ್ಲಿ ಖ್ಯಾತ ಹೃದ್ರೋಗ ತಜ್ಞರ ಮೇಲ್ವಿಚಾರಣೆಯಲ್ಲಿ ತಾರಕರತ್ನ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆದೊಯ್ಯಲಾಯಿತು.