CINE| ನಟ ವಿಜಯ್‌ ರಾಜಕೀಯ ಎಂಟ್ರಿ ಪಕ್ಕಾನಾ? ಇಷ್ಟೆಲ್ಲಾ ಸಿದ್ಧತೆ ಅದಕ್ಕೇನಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಮಿಳು ಹೀರೋ ದಳಪತಿ ವಿಜಯ್ ರಾಜಕೀಯಕ್ಕೆ ಬರುತ್ತಿದ್ದಾರೆ ಎಂಬ ಪ್ರಚಾರ ಹಲವು ದಿನಗಳಿಂದ ನಡೆಯುತ್ತಿದ್ದರೂ ಈ ಬಗ್ಗೆ ನಟ ಮಾತ್ರ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ. ಅವರ ಬಹಿರಂಗವಾಗಿ ಮಾತನಾಡುತ್ತಿರುವ ಮಾತುಗಳು ಪರೋಕ್ಷವಾಗಿ ರಾಜಕೀಯಕ್ಕೆ ಬರುವ ಮುನ್ಸೂಚನೆಯೇ ಎಂದು ಅಭಿಮಾನಿಗಳು, ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ. ರಾಜಕೀಯಕ್ಕೆ ಬಂದರೆ ಸಂಪೂರ್ಣವಾಗಿ ಸಿನಿಮಾ ಬಿಡುತ್ತೇನೆ ಎಂದು ವಿಜಯ್ ಹೇಳಿದ್ದಾರೆ.

ಉಳಿದಂತೆ ವಿಜಯ್ ರಾಜಕೀಯ ಪ್ರವೇಶಕ್ಕೆ ಸಾಕಷ್ಟು ಪ್ಲಾನ್ ಮಾಡಿಕೊಂಡು ಒಂದೊಂದೇ ಹೆಜ್ಜೆ ಇಡುತ್ತಿರುವಂತೆ ಕಾಣುತ್ತಿದೆ. ಕೆಲ ದಿನಗಳ ಹಿಂದೆ ಚೆನ್ನೈನಲ್ಲಿ 10 ಮತ್ತು 12ನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದಲ್ಲದೆ, ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್, ದ್ರಾವಿಡ ಚಳವಳಿಯ ನಾಯಕ ಪೆರಿಯಾರ್ ರಾಮಸ್ವಾಮಿ ಮತ್ತು ಮದ್ರಾಸ್ ರಾಜ್ಯದ ಮಾಜಿ ಸಿಎಂ ಕಾಮರಾಜ್ ಅವರಂತಹ ನಾಯಕರ ಬಗ್ಗೆ ಸಾಧ್ಯವಾದಷ್ಟು ಓದುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ವಿಜಯ್ ರಾಜಕೀಯಕ್ಕೆ ಬರುತ್ತಾರೆ ಎಂಬ ಊಹಾಪೋಹಗಳ ನಡುವೆ ಅಂಬೇಡ್ಕರ್, ಪೆರಿಯಾರ್ ಮತ್ತು ಕಾಮರಾಜ್ ಅವರಂತಹ ನಾಯಕರನ್ನು ನೆನಪಿಸಿಕೊಳ್ಳುವುದು ಚರ್ಚೆಯ ವಿಷಯವಾಗಿದೆ.

ಇದೇ ಸಭೆಯಲ್ಲಿ ಮತಗಳ ಬಗ್ಗೆಯೂ ಪ್ರಮುಖ ಟೀಕೆಗಳನ್ನು ಮಾಡಲಾಯಿತು. “ನೀವು ಮತದಾರರು, ಮುಂದಿನ ದಿನಗಳಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡುವವರು ನೀವೇ. ಯೋಚಿಸಿ ಮತ ಹಾಕಿ, ಹಣಕ್ಕಾಗಿ ನಿಮ್ಮ ಮುತವನ್ನು ಮಾರಿಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದರು.

ಇದೀಗ ರಾಜಕೀಯ ಪ್ರವೇಶಕ್ಕಾಗಿ ಹೊಸ ಸುದ್ದಿ ವಾಹಿನಿಯೊಂದು ಸ್ಥಾಪನೆಯಾಗಲಿದೆಯಂತೆ. ಮಗ ಜೇಸನ್ ಸಂಜಯ್ ನಿರ್ದೇಶಕನಾಗಲು ಹೊರಟಿರುವುದು ಗೊತ್ತೇ ಇದೆ. ಜೇಸನ್ ಸಂಜಯ್ ಕಾಲಿವುಡ್ ಸ್ಟಾರ್ ನಿರ್ಮಾಣ ಸಂಸ್ಥೆ ‘ಲೈಕಾ ಪ್ರೊಡಕ್ಷನ್ಸ್’ ನಲ್ಲಿ ತಮ್ಮ ಮೊದಲ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ವಿಜಯ್ ರಾಜಕೀಯ ಪ್ರವೇಶಕ್ಕೂ ಮುನ್ನ ಕುಟುಂಬ ಹಾಗೂ ಇತರೆ ವಿಚಾರಗಳನ್ನು ಸರಿಪಡಿಸಿಕೊಳ್ಳಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!