ಅಭಿಮಾನಿ ಕಾಲಿನ ಮೇಲೆ ಹರಿದ ನಟ ಯಶ್ ಬೆಂಗಾವಲು ಪಡೆ ವಾಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ಯಶ್ ಅವರು ಹೋದಲ್ಲೆಲ್ಲಾ ಅವರ ಅಭಿಮಾನಿಗಳಿಂದ ಗುಂಪುಗೂಡುತ್ತಾರೆ. ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಬಯಸುತ್ತಾರೆ. ಇಂತಹ ಹಲವು ಘಟನೆಗಳು ನಡೆದಿವೆ. ಯಶ್ ಹುಟ್ಟುಹಬ್ಬದ ಕಹಿ ನೆನಪುಗಳು ಇನ್ನೂ ಹಾಗೆಯೆ ಇದೆ ಇದೀಗ ಮತ್ತೊಂದು ಅಂತಹದ್ದೇ ಘಟನೆ ನಡೆದಿದೆ. ನಟ ಯಶ್​ ಬೆಂಗಾವಲು ವಾಹನ ಹರಿದು ಅಭಿಮಾನಿಯೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಬಳ್ಳಾರಿಯ ಹೊರವಲಯದ ಬಾಲಾಜಿ ಕ್ಯಾಂಪ್​ನಲ್ಲಿ ಈ ಘಟನೆ ನಡೆದಿದೆ.

ಬಳ್ಳಾರಿಯ ಅಮೃತೇಶ್ವರ ಸ್ಫಟಿಕ ಲಿಂಗ ದೇವಾಲಯವನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ಇಲ್ಲಿಗೆ ಯಶ್ ಆಗಮಿಸಿದ್ದಾರೆ, ಯಶ್ ಆಗಮನದ ಸುದ್ದಿ ಕೇಳಿ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಯಶ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ವಸಂತ ಎಂಬ ಯುವಕನ ಕಾಲಿನ ಮೇಲೆ ಕಾರು ಹರಿದಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!