ಹೊಸದಿಗಂತ ಡಿಜಿಟಲ್ ಡೆಸ್ಕ್
ನಟಿ ರಶ್ಮಿಕಾ ಮಂದಣ್ಣ ಕನ್ನಡ ಸಿನಿಮಾ ಮೂಲಕ ತೆರೆ ಮೇಲೆ ಬಂದು ಇಂದು ಬಾಲಿವುಡ್, ಟಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ. ಆದರೆ ರಶ್ಮಿಕಾ ಕೇವಲ ನಟನೆಯಲ್ಲಿ ಸುದ್ದಿಯಾಗದೆ ಇತರೆ ವಿಚಾರದಲ್ಲೂ ಸದಾ ಸುದ್ದಿಯಲ್ಲಿರುತ್ತಾರೆ.
ಇತ್ತೀಚೆಗೆ ರಶ್ಮಿಕಾ ಮಂದಣ್ಣ ಕನ್ನಡ ಚಿತ್ರರಂಗವನ್ನು ಮರೆತಿದ್ದಾರೆ, ತಮ್ಮ ಮೊದಲ ಸಿನಿಮಾ ಹಾಗೂ ಅದರ ನಿರ್ದೇಶಕರನ್ನು ನೆನಪಿಸಿಕೊಳ್ಳುತ್ತಿಲ್ಲಾ ಎಂಬೆಲ್ಲಾ ಮಾತುಗಳು ಕೇಳಿಬಂದಿತ್ತು.ಈ ಬಗ್ಗೆ ಸಂದರ್ಶನವೊಂದರಲ್ಲಿ ನಿರೂಪಕಿ ಕೇಳಿದ ಪ್ರಶ್ನೆಗೆ ಉತ್ತಿರಿಸುತ್ತಾ ರಶ್ಮಿಕಾ, ತನಗೆ ಮೊದಲ ಬಾರಿಗೆ ಅವಕಾಶ ಕೊಟ್ಟವರ ಹೆಸರು ಹೇಳಲು ಹಿಂದೇಟು ಹಾಕಿದ್ದರು.
ಇದರಿಂದ ರಶ್ಮಿಕಾ ಮಂದಣ್ಣ ಈ ನಡೆ ಕನ್ನಡದ ಅಭಿಮಾನಿಗಳ ಟೀಕೆಗೆ ಕಾರಣವಾಗಿತ್ತು.ಹಾಗು ರಶ್ಮಿಕಾ ಮಂದಣ್ಣ ಅವರನ್ನು ಕನ್ನಡ ಸಿನಿಮಾದಿಂದ ಬ್ಯಾನ್ ಮಾಡಬೇಕೆಂಬ ಕೂಗು ಕೇಳಲು ಶುರುವಾಗಿದೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ‘ರಶ್ಮಿಕಾ ಮಂದಣ್ಣ ಬ್ಯಾನ್…’ರಶ್ಮಿಕಾ ಬಾಯ್ಕಾಟ್’ ಎಂಬ ಹ್ಯಾಷ್ ಟ್ಯಾಗ್ಗಳು ಟ್ರೇಡಿಂಗ್ ಆಗುತ್ತಿವೆ.
ಈ ನಡುವೆ ಕನ್ನಡ ಸಿನಿಮಾದಿಂದ ರಶ್ಮಿಕಾ ಅವರನ್ನು ಬ್ಯಾನ್ ಮಾಡಲಾಗಿದೆ ಸುದ್ದಿ ಹರಿದಾಡುತ್ತಿದ್ದುಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಪ್ರತಿಕ್ರಿಯಿಸಿದ್ದಾರೆ.
ರಶ್ಮಿಕಾ ಮಂದಣ್ಣ ಅವರನ್ನ ಬ್ಯಾನ್ ಮಾಡೋ ರೈಟ್ಸ್ ನಮಗೆ ಇಲ್ಲಾ. ಈ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ. ಅವರನ್ನು ಬ್ಯಾನ್ ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.