ಹೊಸದಿಗಂತ ಡಿಜಿಟಲ್ ಡೆಸ್ಕ್ :
ಅದಾನಿ ಗ್ರೂಪ್ನ ಹಿಂಡೆನ್ಬರ್ಗ್ ವರದಿಗೆ ಸಂಬಂಧಿಸಿದಂತೆ ಆದೇಶ ಹೊರಬೀಳುವವರೆಗೂ
ಸುದ್ದಿಗಳನ್ನು ಪ್ರಕಟಿಸದಂತೆ ಪತ್ರಿಕೆಗಳಿಗೆ ನಿರ್ಬಂಧವನ್ನು ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.
“ನಾವು ಮಾಧ್ಯಮದ ವಿರುದ್ಧ ಯಾವುದೇ ತಡೆಯಾಜ್ಞೆ ನೀಡಲು ಹೋಗುವುದಿಲ್ಲ” ಎಂದು ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಹೇಳಿದೆ.
ಅದಾನಿ ಎಂಟರ್ಪ್ರೈಸಸ್ನ ಹಿಂಡನ್ಬರ್ಗ್ ವರದಿಗೆ ಸಂಬಂಧಿಸಿದ ಸುದ್ದಿಗಳನ್ನು ಪ್ರಕಟಿಸದಂತೆ ಪತ್ರಿಕಾ ಮಾಧ್ಯಮವನ್ನು ನಿರ್ಬಂಧಿಸುವಂತೆ ಕೋರಿ ವಕೀಲ ಎಂಎಲ್ ಶರ್ಮಾ ಅವರು ಸಲ್ಲಿಸಿದ ಮನವಿಯನ್ನು ಪೀಠವು ಆಲಿಸಿತು. ಈ ವೇಳೆ ಅರ್ಜಿಯನ್ನು ವಜಾಗೊಳಿಸಿದೆ.