ಆದಿಪುರುಷ್​ ಸಿನಿಮಾದ ಸಂಭಾಷಣಕಾರ ಮನೋಜ್​ ಮುಂತಶೀರ್ ಕೊಲೆ ಬೆದರಿಕೆ: ಭದ್ರತೆ ಒದಗಿಸಿದ ಮುಂಬೈ ಪೊಲೀಸರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

‘ಆದಿಪುರುಷ್​’ (Adipurush) ಸಿನಿಮಾ ಬಿಡುಗಡೆ ಬೆನ್ನಲ್ಲೇ ವಿವಾದಗಳು ಸುತ್ತಿಕೊಂಡಿದ್ದು, ಸಿನಿಮಾದಲ್ಲಿ ಬಳಕೆ ಆಗಿರುವ ಭಾಷೆಯ ಬಗ್ಗೆ ಕೆಲವರು ತಕರಾರು ತೆಗೆದಿದ್ದಾರೆ.

ಈ ನಡುವೆ ಸಿನಿಮಾದ ಸಂಭಾಷಣಕಾರ ಮನೋಜ್​ ಮುಂತಶೀರ್ (Manoj Muntashir)​ ಅವರಿಗೆ ಕೆಲವರು ಕೊಲೆ ಬೆದರಿಕೆ ಹಾಕಿದ್ದಾರೆ. ಹಾಗಾಗಿ ಅವರಿಗೆ ಮುಂಬೈ ಪೊಲೀಸರು ಭದ್ರತೆ ಒದಗಿಸಿದ್ದಾರೆ.

‘ಆದಿಪುರುಷ್​’ ಸಿನಿಮಾದಲ್ಲಿ ಆಂಜನೇಯನ ಪಾತ್ರಕ್ಕೆ ಮನೋಜ್​ ಮುಂತಶೀರ್​ ಬರೆದ ಸಂಭಾಷಣೆಗಳು ತೀರಾ ಕಳಪೆ ಆಗಿವೆ ಎಂದು ಅನೇಕರು ದೂರಿದ್ದಾರೆ. ಅಲ್ಲದೇ ‘ನಾವು ರಾಮಾಯಣ ಆಧರಿಸಿ ಈ ಸಿನಿಮಾ ಮಾಡಿಲ್ಲ’ ಎಂದು ಮನೋಜ್ ಅವರು ಮಾತು ಬದಲಿಸಿದ್ದು ಕೂಡ ಜನರ ಕೋಪಕ್ಕೆ ಕಾರಣ ಆಗಿದೆ.

ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಕ್ಷತ್ರಿಯಾ ಕರ್ಣಿ ಸೇನಾದವರು ಸುದ್ದಿಗೋಷ್ಠಿ ನಡೆಸಿ ‘ಆದಿಪುರುಷ್​’ ಸಿನಿಮಾದ ಸಂಭಾಷಣಕಾರ ಮನೋಜ್​ ಮುಂತಶೀರ್​ ಹಾಗೂ ನಿರ್ದೇಶಕ ಓಂ ರಾವತ್​ ಅವರನ್ನು ಕೊಲೆ ಮಾಡುವುದಾಗಿ ಸುದ್ದಿಗೋಷ್ಠಿಯಲ್ಲಿ ಬೆದರಿಕೆ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಮನೋಜ್​ ಮುಂತಶೀರ್​ ಅವರು ಭದ್ರತೆಗಾಗಿ ಪೊಲೀಸರ ಬಳಿ ಮನವಿ ಮಾಡಿಕೊಂಡರು. ಹಾಗಾಗಿ ಅವರಿಗೆ ಮುಂಬೈ ಪೊಲೀಸರು ಭದ್ರತೆ ನೀಡಿದ್ದಾರೆ.

ದೇಶಾದ್ಯಂತ ‘ಆದಿಪುರುಷ್​’ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಈ ಸಿನಿಮಾವನ್ನು ಬ್ಯಾನ್​ ಮಾಡಬೇಕು ಎಂದು ಕೂಡ ಕೆಲವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!