ಚಂದ್ರಬಾಬು ನಾಯ್ಡು ಜಾಮೀನು ಅರ್ಜಿ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು(Chandrababu Naidu) ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಆಂಧ್ರಪ್ರದೇಶ ಹೈಕೋರ್ಟ್​ ಅಕ್ಟೋಬರ್ 19ಕ್ಕೆ ಮುಂದೂಡಿದೆ.
ನಾಯ್ಡು ಅವರ ಕಾನೂನು ತಂಡದ ಕೆಲವು ಸದಸ್ಯರು ಗೈರಾದ ಕಾರಣ, ಉಳಿದ ತಂಡಗಳು ವಿಚಾರಣೆಯನ್ನು ಮುಂದೂಡುವಂತೆ ಮನವಿ ಮಾಡಿದವು.

ಈ ವೇಳೆ ಫೈಬರ್ ನೆಟ್ ಹಗರಣ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರನ್ನು ಅಕ್ಟೋಬರ್ 18 ರವರೆಗೆ ಬಂಧಿಸುವುದಿಲ್ಲ ಎಂದು ಆಂಧ್ರ ಪ್ರದೇಶ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.

ಅಂಗಲ್ಲು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದರೂ, ಚಂದ್ರಬಾಬು ನಾಯ್ಡು ಅವರನ್ನು ಕಳೆದ ತಿಂಗಳು ಸಿಐಡಿ ಬಂಧಿಸಿತ್ತು. ಇದೇ ವೇಳೆ ಕೌಶಲಾಭಿವೃದ್ಧಿ ಹಗರಣ ಸೇರಿದಂತೆ ಇತರ ಪ್ರಕರಣಗಳಿಗೆ ಸಂಬಂಧಿಸಿದಂತೆ ಚಂದ್ರಬಾಬುಗೆ ನ್ಯಾಯಾಂಗ ಬಂಧನ ಮುಂದುವರೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!