ಕೇರಳದ ಅನಂತಪದ್ಮನಾಭಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಆಫ್ರಿಕಾ ಕ್ರಿಕೆಟಿಗ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿಗಾಗಿ ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ಆಟಗಾರರು ಈಗಾಗಲೇ ತಿರುವನಂತಪುರವನ್ನು ತಲುಪಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ಸ್ಪಿನ್ನರ್ ಕೇಶವ್ ಮಹಾರಾಜ್ ತಿರುವನಂತಪುರದಲ್ಲಿರುವ ಪ್ರಸಿದ್ಧ ಅನಂತಪದ್ಮನಾಭಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.

ಕೇಶವ್ ಮಹಾರಾಜ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಮಾತ್ರವಲ್ಲದೆ ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ಧರಿಸಿ ಎಲ್ಲರಿಗೂ ನವರಾತ್ರಿಯ ಶುಭಾಶಯಗಳನ್ನು ಕೋರಿದ್ದಾರೆ.

ಕೇಶವ್ ಮಹಾರಾಜ್‌ ಭಾರತೀಯ ಮೂಲದವರು ಮತ್ತು ಅವರ ಪೂರ್ವಜರು ಉತ್ತರ ಪ್ರದೇಶದ ಸುಲ್ತಾನ್‌ಪುರದವರು. 32 ವರ್ಷ ವಯಸ್ಸಿನ ಕೇಶವ್ ಮಹಾರಾಜ್ 2016 ರ ನವೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಪದಾರ್ಪಣೆ ಮಾಡಿದರು ಮತ್ತು ಎಲ್ಲಾ ಮೂರು ಮಾದರಿ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಭಾಗವಾಗಿದ್ದಾರೆ. ಭಾರತದಲ್ಲಿ ನಡೆಯುವ ಟಿ20 ಮತ್ತು ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನ ಹೊಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!