16 ವರ್ಷಗಳ ಬಳಿಕ ಈ ಬಾರಿ ನಾಲ್ಕು ದಿನ ಮುಂಚಿತವಾಗಿ ಮುಂಗಾರು ಪ್ರವೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿಯ ನೈಋತ್ಯ ಮುಂಗಾರು ಮಳೆ ಕೊಂಚ ಮುಂಚಿತವಾಗಿಯೇ ಆಗಮಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಾಡಿಕೆಯಂತೆ ಕೇರಳಕ್ಕೆ ಜೂನ್ 1ರಂದು ಮಳೆ ಕಾಲಿಡುತ್ತದೆ. ಆದರೆ ಈ ಬಾರಿ ಮುಂಗಾರು ಮಾರುತಗಳು 4 ದಿನಗಳ ಕಾಲ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶ ಮಾಡಲಿದೆ ಎಂದು ಹೇಳಿದೆ.
ಜೂನ್ 1 ರ ಸಾಮಾನ್ಯ ದಿನಾಂಕಕ್ಕಿಂತ ಮುಂಚಿತವಾಗಿ, ಅಂದರೆ ಮೇ 27 ರಂದು ನೈಋತ್ಯ ಮಾನ್ಸೂನ್ ಕೇರಳವನ್ನು ತಲುಪುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ನಿರೀಕ್ಷೆಯಂತೆ ಮಾನ್ಸೂನ್ ಕೇರಳಕ್ಕೆ ಆಗಮಿಸಿದರೆ, ಐಎಂಡಿ ದತ್ತಾಂಶದ ಪ್ರಕಾರ, 2009 ರಲ್ಲಿ ಮೇ 23 ರ ಬಳಿಕ ಇದೇ ಮೊದಲ ಬಾರಿಗೆ ಭಾರತದ ಮುಖ್ಯ ಭೂಭಾಗದಲ್ಲಿ ಮುಂಗಾರು ಮಾರುತಗಳು ಬೇಗನೆ ಪ್ರವೇಶ ಮಾಡುತ್ತಿವೆ.

ಸಾಮಾನ್ಯವಾಗಿ, ನೈಋತ್ಯ ಮಾನ್ಸೂನ್ ಜೂನ್ 1 ರ ವೇಳೆಗೆ ಕೇರಳದ ಮೇಲೆ ಪ್ರಾರಂಭವಾಗಲಿದೆ ಮತ್ತು ಬಳಿಕ ಜುಲೈ 8 ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಇದು ಸೆಪ್ಟೆಂಬರ್ 17 ರ ಸುಮಾರಿಗೆ ವಾಯುವ್ಯ ಭಾರತದಿಂದ ಹಿಮ್ಮೆಟ್ಟಲು ಪ್ರಾರಂಭಿಸುತ್ತದೆ ಮತ್ತು ಅಕ್ಟೋಬರ್ 15 ರ ವೇಳೆಗೆ ಸಂಪೂರ್ಣವಾಗಿ ಹಿಮ್ಮೆಟ್ಟುತ್ತದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರ್ನಾಟಕಕ್ಕೆ ಮೇ 30 ಅಥವಾ 31 ಕ್ಕೆ ಆಗಮಿಸುವ ನಿರೀಕ್ಷೆ ಇದೆ. ಅಂದರೆ, ರಾಜ್ಯಕ್ಕೆ ಸಾಮಾನ್ಯ ದಿನಗಳಿಗಿಂತ 5 ರಿಂದ 6 ದಿನ ಮುಂಚಿತವಾಗಿ ಆಗಮನವಾಗುವ ಸಾಧ್ಯತೆ ಇದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!