May 2, 2026
Saturday, May 2, 2026
spot_img

ಮೋದಿ ನಂತರ ಗಂಭೀರ್‌ದ್ದೇ ಅತೀ ಕಷ್ಟದ ಕೆಲಸ! ಟೀಮ್ ಇಂಡಿಯಾ ಕೋಚ್ ಗೆ ತರೂರ್ ಸಾಥ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಇತ್ತೀಚಿನ ದಿನಗಳಲ್ಲಿ ಸತತ ಟೀಕೆಗಳನ್ನು ಎದುರಿಸುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅನುಭವಿಸಿದ ಅನಿರೀಕ್ಷಿತ ಸೋಲು ಅಭಿಮಾನಿಗಳಲ್ಲಿ ಅಸಮಾಧಾನ ಮೂಡಿಸಿದೆ. ಇಂತಹ ಕಠಿಣ ಸಮಯದಲ್ಲಿ ಕಾಂಗ್ರೆಸ್ ಸಂಸದ ಮತ್ತು ಕ್ರಿಕೆಟ್ ಪ್ರೇಮಿ ಶಶಿ ತರೂರ್, ಗಂಭೀರ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸುವ ಮೂಲಕ ಸುದ್ದಿಯಾಗಿದ್ದಾರೆ.

ನಾಗ್ಪುರದಲ್ಲಿ ಗೌತಮ್ ಗಂಭೀರ್ ಅವರನ್ನು ಭೇಟಿಯಾದ ಫೋಟೋವನ್ನು ಹಂಚಿಕೊಂಡಿರುವ ತರೂರ್, ಗಂಭೀರ್ ಅವರ ಕೆಲಸವನ್ನು ದೇಶದ ಅತ್ಯಂತ ಸವಾಲಿನ ಕೆಲಸಗಳಿಗೆ ಹೋಲಿಸಿದ್ದಾರೆ.

“ಭಾರತದಲ್ಲಿ ಪ್ರಧಾನ ಮಂತ್ರಿ ಹುದ್ದೆಯ ನಂತರ ಅತ್ಯಂತ ಕಷ್ಟಕರ ಕೆಲಸ ಮಾಡುತ್ತಿರುವ ವ್ಯಕ್ತಿ ಎಂದರೆ ಅದು ಗೌತಮ್ ಗಂಭೀರ್.”

ಲಕ್ಷಾಂತರ ಜನರು ಪ್ರತಿದಿನ ಅವರ ನಿರ್ಧಾರಗಳನ್ನು ಪ್ರಶ್ನಿಸಿದರೂ, ಗಂಭೀರ್ ಅವರು ಸಂಪೂರ್ಣ ಶಾಂತತೆ ಮತ್ತು ದೃಢನಿಶ್ಚಯದಿಂದ ತಮ್ಮ ಕೆಲಸ ಮುಂದುವರಿಸುತ್ತಿದ್ದಾರೆ ಎಂದು ತರೂರ್ ಗುಣಗಾನ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !