ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬಂತು ದೂರಿನ ಪತ್ರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ದ್ರೌಪದಿ ಮುರ್ಮು ಅವರಿಗೆ ವಿರೋಧ ಪಕ್ಷಗಳ ನಾಯಕರು ಪತ್ರ ಬರೆದಿದ್ದಾರೆ.
ವಿರೋಧ ಪಕ್ಷಗಳು ಮತ್ತು ನಾಯಕರನ್ನು ಗುರಿಯಾಗಿಸಿಕೊಳ್ಳಲು ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಹೀಗಾಗಿ ಕೂಡಲೇ ಮಧ್ಯೆ ಪ್ರವೇಶಿಸಬೇಕು ಎಂದು ಕೇಳಿಕೊಂಡಿವೆ.

ಅಧಿವೇಶನದ ಕಲಾಪಗಳ ಮೇಲೆ ಪರಿಣಾಮ ಬೀರಿರುವ ಬೆಲೆ ಏರಿಕೆ ಮತ್ತು ಜಿಎಸ್‌ಟಿ ಹೆಚ್ಚಳದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡದ ಸರ್ಕಾರದ ಹಠಮಾರಿ ಧೋರಣೆಯ ಬಗ್ಗೆಯೂ ವಿರೋಧ ಪಕ್ಷಗಳ ನಾಯಕರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಮೋದಿ ನೇತೃತ್ವದ ಸರ್ಕಾರವು ತನ್ನ ರಾಜಕೀಯ ವಿರೋಧಿಗಳನ್ನು ಹಣಿಯಲು ಅವರ ವಿರುದ್ಧ ವ್ಯವಸ್ಥಿತ ಸೇಡಿನ ಅಭಿಯಾನದ ಭಾಗವಾಗಿ ತನಿಖಾ ಸಂಸ್ಥೆಗಳನ್ನು ನಿರಂತರವಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಇದನ್ನು ನಿಮ್ಮ ಗಮನಕ್ಕೆ ತರಲು ನಾವು ಈ ಪತ್ರವನ್ನು ಬರೆಯುತ್ತಿದ್ದೇವೆ’ ಎಂದು ಕಾಂಗ್ರೆಸ್, ಎಎಪಿ, ಆರ್‌ಜೆಡಿ ಮತ್ತು ಸಿಪಿಐ-ಎಂ ಸೇರಿದಂತೆ ಹಲವು ಪಕ್ಷಗಳ ನಾಯಕರು ಸಹಿ ಹಾಕಿರುವ ಪತ್ರದಲ್ಲಿ ದೂರಲಾಗಿದೆ.

‘ಕಾನೂನು ಎಂದರೆ ಕಾನೂನಾಗಿದೆ. ಅದನ್ನು ಭಯ ಅಥವಾ ಯಾವುದೇ ವ್ಯಕ್ತಿಯ ಪರವಾಗಿಲ್ಲದೆಯೇ ಜಾರಿಗೊಳಿಸಬೇಕು. ಆದರೆ, ಸದ್ಯ ಕಾನೂನನ್ನು ಅನಿಯಂತ್ರಿತವಾಗಿ, ಆಯ್ದ ಮತ್ತು ಹಲವಾರು ವಿರೋಧ ಪಕ್ಷಗಳ ಪ್ರಮುಖ ನಾಯಕರ ವಿರುದ್ಧ ಯಾವುದೇ ಸಮರ್ಥನೆ ಇಲ್ಲದೆ ಬಳಸಲಾಗುತ್ತಿದೆ. ಈ ಅಭಿಯಾನದ ಏಕೈಕ ಗುರಿ ವ್ಯಕ್ತಿಯ ಖ್ಯಾತಿಯನ್ನು ನಾಶಪಡಿಸುವುದಾಗಿದೆ. ಸೈದ್ಧಾಂತಿಕವಾಗಿ ಮತ್ತು ರಾಜಕೀಯವಾಗಿ ಬಿಜೆಪಿ ವಿರುದ್ಧ ಹೋರಾಡುವ ಶಕ್ತಿಯನ್ನೇ ದುರ್ಬಲಗೊಳಿಸುವುದಾಗಿದೆ’ ಎಂದು ವಿರೋಧ ಪಕ್ಷದ ನಾಯಕರು ಪತ್ರದಲ್ಲಿ ದೂರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!