ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಇದೀಗ ಇಡಿ ಶಾಕ್ ನೀಡಿದ್ದು, ಅಬಕಾರಿ ನೀತಿಯ ಲಂಚದ ಹಣ ಅಕ್ರಮವಾಗಿ ವರ್ಗಾವಣೆ ಆರೋಪಹರಿಸಲಾಗಿದ್ದು, ಇಡಿ ಕೇಸ್ ದಾಖಲಿಸಿದೆ
ಸಿಬಿಐ ದಾಳಿಯ ಕೆಲವು ದಿನಗಳ ನಂತರ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು PMLA ಅಡಿಯಲ್ಲಿ ಇಡಿ ಬುಕ್ ಮಾಡಿದೆ.
ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಹಲವರ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.
ಸಿಬಿಐ ದಾಖಲಿಸಿದ ಪ್ರಥಮ ಮಾಹಿತಿ ವರದಿ(ಎಫ್ಐಆರ್) ಮತ್ತು ಅಬಕಾರಿ ನೀತಿಯನ್ನು ತಿರುಚುವ ಮೂಲಕ ಉತ್ಪತ್ತಿಯಾದ ಅಪರಾಧದ ಆದಾಯವನ್ನು ಸಾಕ್ಷ್ಯಾಧಾರಗಳು ಬಹಿರಂಗಪಡಿಸಿದ ನಂತರ ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ದೆಹಲಿ ಸರ್ಕಾರದ ಅಬಕಾರಿ ನೀತಿ ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಎಫ್ಐಆರ್ನಲ್ಲಿ ಹೆಸರಿಸಲಾದ 15 ವ್ಯಕ್ತಿಗಳಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಸೇರಿದ್ದಾರೆ.