ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕರ್ನಾಟಕ ಚುನಾವಣೆಗೆ ಬಿಜೆಪಿ ಈಗಾಗಲೇ ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಯುಪಿ ಸಿಎ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಪ್ರಮುಖರು ಈ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.
ಆದರೆ ಈ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಿಜೆಪಿಗೆ ಒಬ್ಬೊಬ್ಬ ಸ್ಟಾರ್ ಪ್ರಚಾರಕರು ಅಲಭ್ಯರಾಗುತ್ತಿದ್ದಾರೆ. ಇದೀಗ ಕೇಂದ್ರ ರಕ್ಷಣಾ ಸಚಿವ, ಕರ್ನಾಟಕದ ಸ್ಟಾರ್ ಪ್ರಚಾರಕ ರಾಜನಾಥ್ ಸಿಂಗ್ಗೆ ಕೋವಿಡ್ ಕಾಣಿಸಿಕೊಂಡಿದೆ. ಹೀಗಾಗಿ ರಾಜನಾಥ್ ಸಿಂಗ್ ಸದ್ಯ ಕ್ವಾರಂಟೈನ್ನಲ್ಲಿದ್ದು, ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.
ಭಾರತೀಯ ವಾಯುಸೇನಾ ಕಮಾಂಡರ್ಸ್ ಕಾನ್ಫರೆನ್ಸ್ನಲ್ಲಿ ರಾಜನಾಥ್ ಸಿಂಗ್ ಭಾಗವಹಿಸಬೇಕಿತ್ತು. ಆದರೆ ಕೋವಿಡ್ ಕಾರಣ ಈ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಪಾಲ್ಗೊಳ್ಳುತ್ತಿಲ್ಲ. ರಾಜನಾಥ್ ಸಿಂಗ್ಗೆ ಮೈಲ್ಡ್ ಸಿಂಪ್ಟಮ್ಸ್ ಕಾಣಿಸಿಕೊಂಡಿದೆ. ರಾಜನಾಥ್ ಸಿಂಗ್ ಆರೋಗ್ಯವಾಗಿದ್ದಾರೆ. ವೈದ್ಯರ ಸಲಹೆಯಂತೆ ರಾಜನಾಥ್ ಸಿಂಗ್ ವಿಶ್ರಾಂತಿ ಪಡೆದುಕೊಂಡಿದ್ದಾರೆ. ವೈರಸ್ ಹರಡು ಭೀತಿ ಇರುವುದರಿಂದ ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಈ ಕಾರಣ ರಾಜನಾಥ್ ಸಿಂಗ್ಗೆ ಚುನಾವಣಾ ಪ್ರಚಾರದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ. ವೈದ್ಯರು ವಿಶ್ರಾಂತಿ ಸೂಚಿಸಿರುವ ಹಿನ್ನಲೆಯಲ್ಲಿ, ರಾಜನಾಥ್ ಸಿಂಗ್ ಕರ್ನಾಟಕ ಪ್ರಚಾರದಿಂದ ಹೊರಗುಳಿಯಲು ಬಯಸಿದ್ದಾರೆ. ಈ ತಿಂಗಳ ಅಂತ್ಯದಲ್ಲಿ ರಾಜನಾಥ್ ಸಿಂಗ್ ಕರ್ನಾಟಕದಲ್ಲಿ ಪ್ರಚಾರಕ್ಕೆ ಆಗಮಿಸಬೇಕಿತ್ತು.