ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸೈಯದ್ ಅಕ್ಮಲ್ ಅನ್ಸರ್ ಗೋಡೆ ಮೇಲೆ ತನ್ನ ಪತ್ನಿಯ ಅಕ್ರಮ ಸಂಬಂಧ ಹಾಗೂ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ.
ಇಬ್ಬರು ಮಕ್ಕಳಿದ್ದರೂ ಪತ್ನಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು. ತನ್ನ ಸಾವಿಗೆ ಯಾರೆಲ್ಲಾ ಕಾರಣ ಎಂದು ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.