ಮತ್ತೆ ಕರುನಾಡಿಗೆ ಪ್ರಧಾನಿ ಮೋದಿ ಎಂಟ್ರಿ, ಈ ರಸ್ತೆಗಳಲ್ಲಿ ನೋ ಎಂಟ್ರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇತ್ತೀಚೆಗಷ್ಟೇ ಕರಾವಳಿ ಹಾಗೂ ಮೈಸೂರು ಭಾಗದಲ್ಲಿ ಭರ್ಜರಿ ಪ್ರಚಾರ ಮಾಡಿದ್ದ ಪ್ರಧಾನಿ ಮೋದಿ ಇದೀಗ ಮತ್ತೆ ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಇಂದು ಮಧ್ಯಾಹ್ನ ಪ್ರಧಾನಿ ಬೆಂಗಳೂರಿಗೆ ಆಗಮಿಸಲಿದ್ದು, ಡಾ. ಕೆ. ಸುಧಾಕರ್‌ ಪರ ಪ್ರಚಾರ ಮಾಡಲಿದ್ದಾರೆ. ಬೆಂಗಳೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ.

ಪ್ರಧಾನಿ ಮೋದಿ ಬೆಂಗಳೂರು ಆಗಮನ ಹಿನ್ನೆಲೆಯಲ್ಲಿ ಕೆಲ ಮಾರ್ಗಗಳಿಗೆ ಎಂಟ್ರಿ ಬಂದ್‌ ಮಾಡಲಾಗಿದೆ. ಮಧ್ಯಾಹ್ನ ಒಂದು ಗಂಟೆಯಿಂದ ರಾತ್ರಿ ೭ ಗಂಟೆವರೆಗೆ ಮಾರ್ಗ ಬದಲಾವಣೆ ಮಾಡಾಗಿದೆ.

ಪ್ಯಾಲೇಸ್‌ ರಸ್ತೆ , ಜಯಮಹಲ್ ರಸ್ತೆ, ಎಮ್‌ವಿ ಜಯರಾಮ್‌, ವಸಂತನಗರ ರಸ್ತೆ, ಸಿ.ವಿ. ರಾಮನ್ ರಸ್ತೆ, ನಂದಿದುರ್ಗ ರಸ್ತೆ, ಮೇಕ್ರಿ ಸರ್ಕಲ್, ವಸಂತ ನಗರ ರಸ್ತೆ, ಬಳ್ಳಾರಿ ರಸ್ತೆ, ತರಬಾಳು ರಸ್ತೆ, ಮೌಂಟ್‌ ಕಾರ್ಮೆಲ್ ಕಾಲೇಜ್ ರಸ್ತೆಯಲ್ಲಿ ಎಂಟ್ರಿ ಬಂದ್‌ ಮಾಡಲಾಗಿದೆ.ಮೇಖ್ರಿ ಸರ್ಕಲ್‌ನಿಂದ ಯಶವಂತಪುರ ರಸ್ತೆವರೆಗೆ ಭಾರೀ ಸರಕು ಸಾಗಾಣಿಕಾ ವಾಹನಗಳ ಸಂಚಾರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ನಗರದೊಳಗೆ ಪ್ರವೇಶಿಸುವುದನ್ನೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸಿಎಮ್‌ಐಟಿ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಬಿಹೆಚ್‌ಇಎಲ್ ಜಂಕ್ಷನ್, ಬಸವೇಶ್ವರ ಸರ್ಕಲ್, ಓಲ್ಡ್ ಉದಯ ಟಿವಿ,‌ ಹಜ್ ಕ್ಯಾಂಪ್ ನಂದಿದುರ್ಗ, ಯಶಪುಂತಪುರ ಗೋವರ್ಧನ್ ಬಳಿ‌ಯಿರುವ ರಸ್ತೆಯನ್ನು ಭಾರೀ ಸರಕು ಸಾಗಾಣಿಕೆ ವಾಹನಗಳು ಮಾರ್ಗ ಬದಲಾವಣೆಗೆ ಬಳಸಿಕೊಳ್ಳಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!