ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದೊಂದು ವಾರದಿಂದ ಬಿಡುವು ಕೊಟ್ಟಿರುವ ಮುಂಗಾರು ಮುಂದಿನ ವಾರದಿಂದ ಮತ್ತೆ ಚುರುಕಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಿರಂತರವಾಗಿ ಒಂದು ವಾರ ಕಾಲ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆಗಳು ಇವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕರಾವಳಿ, ಮಲೆನಾಡು ಹಾಗೂ ರಾಜ್ಯದ ಒಳನಾಡಿನಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಎಡೆಬಿಡದೆ ಮಳೆ ಸುರಿದು ಜನಜೀವನ ಅಸ್ತವ್ಯಸ್ಥವಾಗಿತ್ತು. ಪಶ್ಚಿಮಘಟ್ಟ ಹಾಗೂ ತಪ್ಪಲು ಪ್ರದೇಶದ ಕೆಲವೆಡೆ ಭೂಕುಸಿತ, ರಸ್ತೆ ಸಂಪರ್ಕ ಕಡಿತ, ಮನೆ ಕುಸಿತ, ಜೀವ ಹಾನಿ, ಬೆಳೆ ನಷ್ಟ ಸಂಭವಿಸಿತ್ತು. ಇದೀಗ ಎರಡನೇ ಸುತ್ತಿನ ಆರ್ಭಟಕ್ಕೆ ಮಳೆ ಸಜ್ಜಾಗುತ್ತಿದೆ.