ಅಗ್ನಿಪಥ್ ಯೋಜನೆ ವಿವಾದ: ಉತ್ತರಪ್ರದೇಶದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಐವರ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅಗ್ನಿಪಥ್ ಯೋಜನೆ ಬಗ್ಗೆ ಉತ್ತರಪ್ರದೇಶದಲ್ಲಿ ಪ್ರತಿಭಟನೆ, ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ವಿವಿಧ ರಾಜಕೀಯ ಪಕ್ಷಗಳಿಗೆ ಸೇರಿದ ಐವರು ನಕಲಿ ಸೇನಾ ಆಕಾಂಕ್ಷಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಹರಾನ್ಪುರ ಪೊಲೀಸರ ಪ್ರಕಾರ, ಬಂಧಿತ ಎಲ್ಲಾ ಐವರು ಆರೋಪಿಗಳು ವಿವಿಧ ರಾಜಕೀಯ ಪಕ್ಷಗಳ ಸದಸ್ಯರು, ಪದಾಧಿಕಾರಿಗಳಾಗಿದ್ದಾರೆ.
ಆರೋಪಿಗಳಲ್ಲಿ ಓರ್ವ ಪರಾಗ್ ಪನ್ವರ್ ಎನ್‌ಎಸ್ಯುಐನೊಂದಿಗೆ ಸಂಬಂಧ ಹೊಂದಿದ್ದನು. ಬಂಧಿತ ಆರೋಪಿಗಳನ್ನು ಸಂದೀಪ್ ಪರಾಗ್, ಪವಾರ್, ಮೋಹಿತ್ ಚೌಧರಿ, ಸೌರಭ್ ಕುಮಾರ್ ಮತ್ತು ಉದಯ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಹರಾನ್ಪುರದ ನಿವಾಸಿಗಳಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!