ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರದ ʻಅಗ್ನಿಪಥʼ ಯೋಜನೆ ವಿರುದ್ಧ ಸಶಸ್ತ್ರ ಪಡೆಗಳ ಆಕಾಂಕ್ಷಿಗಳು ತಿರುಗಿಬಿದ್ದಿದ್ದಾರೆ. ಉದ್ಯೋಗ ಭದ್ರತೆ ಮತ್ತು ಪಿಂಚಣಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಯುವಕರು ಗುರುವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಮಧ್ಯೆ ಟೈರ್ಗಳಿಗೆ ಬೆಂಕಿ ಹಚ್ಚಿ ಅವಾಂತರ ಸೃಷ್ಟಿ ಮಾಡಿದ್ದು, ರಸ್ತೆ ತಡೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ಹಿನ್ನೆಲೆ ಬಿಹಾರದ ಹಲವು ಜಿಲ್ಲೆಗಳಲ್ಲಿ ರೈಲು ಮತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಲ ಆಕಾಂಕ್ಷಿಗಳು ʻಈ ಹಿಂದಿನಂತೆ ನೇಮಕಾತಿ ಪ್ರಕ್ರಿಯೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ. ಟೂರ್ ಆಫ್ ಡ್ಯೂಟಿ (ToD) ಈ ಕೂಡಲೇ ಹಿಂತೆಗೆದುಕೊಳ್ಳಬೇಕು. ಕೇವಲ 4 ವರ್ಷಗಳವರೆಗೆ ಯಾರೂ ಸೇನೆಗೆ ಹೋಗಲು ಇಚ್ಚಿಸುವುದಿಲ್ಲ. 4 ವರ್ಷಗಳ ಕಾಲ ಸೇವೆ ಮಾಡಿದ ನಂತರ ನಾವು ಕೆಲಸವಿಲ್ಲದೆ ನಿರುದ್ಯೋಗಿಗಳಾಗಬೇಕೆ..? ಸರ್ಕಾರದ ಈ ಯೋಜನೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
#WATCH | Bihar: Armed forces aspirants protest in Munger against #AgnipathRecruitmentScheme
A protester says "We demand that the recruitment be done as it used to be done earlier,Tour of Duty (ToD) be rolled back & exams be held as earlier. Nobody will go to Army just for 4 yrs" pic.twitter.com/b5dnSUYohW
— ANI (@ANI) June 16, 2022
#WATCH | Bihar: Youth demonstrate in Chhapra, burn tyres and vandalise a bus in protest against the recently announced #AgnipathRecruitmentScheme pic.twitter.com/Ik0pYK26KY
— ANI (@ANI) June 16, 2022