ಅಗ್ನಿಸಾಕ್ಷಿ ನಟಿ ವೈಷ್ಣವಿ ಎಂಗೇಜ್ ಮೆಂಟ್ ಮಾಡಿಕೊಂಡ್ರಾ?: ಈ ಕುರಿತು ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡದ ಕಿರುತೆರೆಯ ಅಗ್ನಿಸಾಕ್ಷಿ, ಬಿಗ್ ಬಾಸ್ ಮೂಲಕ ಶೋ ಮೂಲಕ ಎಲ್ಲರ ಮನೆಮಾತಾದ ವೈಷ್ಣವಿ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದ್ದು, ಈ ಕುರಿತು ನಟಿ ವೈಷ್ಣವಿ ಸ್ಪಷ್ಟನೆ ನೀಡಿದ್ದಾರೆ.

ಇದು ಪಕ್ಕಾ ಅರೇಂಜ್ಡ್ ಮ್ಯಾರೇಜ್. ಹುಡುಗನ ಕಡೆಯವರು ಬಂದು ನೋಡಿ, ಮಾತುಕತೆ ಮಾಡಿರೋದು ನಿಜ. ಆದರೆ, ಇದು ಎಂಗೇಜ್ಮೆಂಟ್ ಅಲ್ಲ, ನಾನಿನ್ನೂ ಒಪ್ಪಿಕೊಂಡಿಲ್ಲ ಎಂದು ಹೇಳಿದ್ದಾರೆ.

ಮನೆಯವರು ನಿರ್ಧರಿಸಿರೋದರಿಂದ ಹುಡುಗ ಕೂಡ ನನಗೆ ಹೊಸ ವ್ಯಕ್ತಿ ಆಗಿರೋದ್ರಿಂದ ನನಗೂ ಕೊಂಚ ಸಮಯಾವಕಾಶ ಬೇಕಾಗಿದೆ. ನಾನಿನ್ನೂ ಈ ಮದುವೆಗೆ ಒಪ್ಪಿಗೆ ಸೂಚಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ವೈಷ್ಣವಿ ಗೌಡ ಅವರ ಕುಟುಂಬ ಒಪ್ಪಿರುವ ಹುಡುಗನ ಹೆಸರು ವಿದ್ಯಾಭರಣ ಆಗಿದ್ದು, ಬೆಂಗಳೂರು ಮೂಲದ ಬ್ಯುಸಿನೆಸ್ಮ್ಯಾನ್ ಆಗಿದ್ದಾರೆ. ವಿದ್ಯಾಭರಣ ಅವರು, 2018ರಲ್ಲಿ `ವಿರಾಜ್’ ಎಂಬ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದಾರೆಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!