ರಸ್ತೆ ಅಪಘಾತದಲ್ಲಿ ಕೃಷಿ ಇಲಾಖೆ ಸಿಬ್ಬಂದಿ ಸಾವು

ಹೊಸದಿಗಂತ ವರದಿ ಚಿತ್ರದುರ್ಗ:

ಲಾರಿ ಮತ್ತು ಕಾರಿನ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಹೊಳಲ್ಕೆರೆ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಹೊಳಲ್ಕೆರೆ ಕೃಷಿ ಇಲಾಖೆ ತಾಂತ್ರಿಕ ಸಿಬ್ಬಂದಿ ವಿ.ವಿಶಾಲ್‌ ಕುಮಾರ್‌ (29 ) ಎಂದು ಗುರುತಿಸಲಾಗಿದೆ.

ಹೊಳಲ್ಕೆರೆ ರಸ್ತೆಯ ತಿರುಮಲ ಡಾಬ ಬಳಿ ಶನಿವಾರ ಬೆಳಿಗ್ಗೆ ವಿಶಾಲ್‌ ಕುಮಾರ್‌ ಕಾರಿಗೆ ಲಾರಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು ವಿಶಾಲ್‌ ಕುಮಾರ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗದಿಂದ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಯುವಕ ಮದುವೆ ನಿಶ್ಚಿತಾರ್ಥ ಭಾನುವಾರ ನಿಗಧಿಯಾಗಿತ್ತು.

ಶಿವಮೊಗ್ಗದಲ್ಲಿ ಬಿಎಸ್ಸಿ (ಕೃಷಿ) ಹಾಗೂ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಎಂಎಸ್ಸಿ (ಕೃಷಿ) ಪದವಿ ಪೂರ್ಣಗೊಳಿಸಿ 2018 ರಲ್ಲಿ ಸರ್ಕಾರಿ ಕೆಲಸಕ್ಕೆ ಸೇರಿದ್ದರು. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!