ಹೊಸದಿಗಂತ ವರದಿ ವಿಜಯಪುರ:
ನಗರದಲ್ಲಿ ವಿವಿಧ ರಸಗೊಬ್ಬರ ಮಾರಾಟ ಮಳಿಗೆಗಳ ಮೇಲೆ ಕೃಷಿ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ನಡೆದಿದೆ.
ಇಲ್ಲಿನ ಆನಂದ ಅಗ್ರೋ ಸೆಂಟರ್, ತಿಕೋಟಾದ ರೇಣುಕಾ ಕೃಷಿ ಸೇವಾ ಕೇಂದ್ರ, ಮುದ್ದೇಬಿಹಾಳದ ಮಲ್ಲಿಕಾರ್ಜುನ ಟ್ರೇಡರ್ಸ್ ನಲ್ಲಿ ರಸಗೊಬ್ಬರ ಹೆಚ್ಚಿನ ದರಕ್ಕೆ ಮಾರಾಟ ಮಾಡಿರುವುದರಿಂದ ಲೈಸನ್ಸ್ ಅಮಾನತು ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.