ಬಿಜೆಪಿ-ಎಐಎಡಿಎಂಕೆ ಮೈತ್ರಿ ಮುರಿದು ಬೀಳುತ್ತಾ ?ಅಣ್ಣಾಮಲೈ ಸೆನ್ಸೇಷನಲ್ ಕಮೆಂಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಮಿಳುನಾಡಿನಲ್ಲಿ ಬಿಜೆಪಿ-ಅಣ್ಣಾಡಿಎಂಕೆ ಮೈತ್ರಿಗೆ ಸಂಕಷ್ಟ ಎದುರಾಗಿದೆ. ಸದ್ಯದಲ್ಲೇ ಈ ಎರಡು ಪಕ್ಷಗಳು ಬೇರ್ಪಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಎಐಎಡಿಎಂಕೆ ಬಿಜೆಪಿಯಿಂದ ನಾಯಕರ ಖರೀದಿಯಲ್ಲಿ ತೊಡಗಿದೆ ಎಂದು ಕೇಸರಿ ಪಕ್ಷ ಆರೋಪಿಸುತ್ತಿದೆ. ಉಭಯ ಪಕ್ಷಗಳ ನಡುವೆ ವಾಗ್ವಾದ ನಡೆಯುತ್ತಿದ್ದಾಗಲೇ ಇದೀಗ ಮತ್ತೊಂದು ವಿವಾದ ಎದ್ದಿದೆ.

ತಮಿಳು ನ್ಯೂಸ್ ಡೈಲಿ ದಿನ ತಂತಿಯ ಮಾಹಿತಿ ಪ್ರಕಾರ… ಶುಕ್ರವಾರ ಚೆನ್ನೈನಲ್ಲಿ ಬಿಜೆಪಿ ರಾಜ್ಯ ಮಟ್ಟದ ಪದಾಧಿಕಾರಿಗಳ ಸಭೆ ನಡೆಸಿದ್ದು, ಇದರಲ್ಲಿ ಎಐಎಡಿಎಂಕೆ ಮೈತ್ರಿ ಬಗ್ಗೆ ಚರ್ಚೆಯಾಗಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದರೆ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುವುದಾಗಿ ಅಣ್ಣಾಮಲೈ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಬಿಜೆಪಿ ಬಲಿಷ್ಠವಾಗಬೇಕು ಅದಕ್ಕಾಗಿ ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಮತ್ತು ಯಾವುದೇ ದ್ರಾವಿಡ ಪಕ್ಷಕ್ಕೆ ಸೆಡ್ಡು ಹೊಡೆಯಬಾರದು ಎಂದರು. ಏಕಾಂಗಿಯಾಗಿ ಚುನಾವಣೆಗೆ ಸ್ಪರ್ಧಿಸಿದರೆ ಮಾತ್ರ ಭ್ರಷ್ಟಾಚಾರ, ವಂಶಪಾರಂಪರ್ಯ ರಾಜಕಾರಣದ ಬಗ್ಗೆ ಬಿಜೆಪಿ ನಿಲುವಿನ ಬಗ್ಗೆ ಜನರು ಗಂಭೀರವಾಗಿರುತ್ತಾರೆ ಎಂದರು. ಅಣ್ಣಾಮಲೈ ಈ ಹೇಳಿಕೆ ನೀಡಿರುವುದು ಸ್ಥಳೀಯ ಮಾಧ್ಯಮಗಳಲ್ಲಿ ಚರ್ಚೆಯ ವಿಷಯವಾಯಿತು. ಆದರೆ, ಅಣ್ಣಾಮಲೈ ಅಂತಹ ಹೇಳಿಕೆ ನೀಡಿಲ್ಲ ಎಂದು ಬಿಜೆಪಿಯ ಹಲವು ಮುಖಂಡರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!