ಎಐಸಿಸಿ ನೂತನ ಅಧ್ಯಕ್ಷ ಖಗೆ೯ಗೆ ತವರೂರಿನಲ್ಲಿ ಅದ್ದೂರಿ ಸ್ವಾಗತ

ಹೊಸದಿಗಂತ ವರದಿ ಕಲಬುರಗಿ:

ಎಐಸಿಸಿ ನೂತನ ಅಧ್ಯಕ್ಷರಾಗಿ ಮೊಟ್ಟ ಮೊದಲ ಬಾರಿಗೆ ಕಲಬುರಗಿ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಮುಖಂಡರು ಹಾಗೂ ಸ್ಥಳೀಯ ಶಾಸಕರು ಅದ್ದೂರಿ ಸ್ವಾಗತ ಕೋರಿದರು. ವಿಶೇಷ ವಿಮಾನದಲ್ಲಿ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಖಗೆ೯ಗೆ ಜೆಸಿಬಿ ಮೂಲಕ ನಗರದ ಬುದ್ದ ವಿಹಾರ ಬಳಿ ಪುಷ್ಪಾರ್ಚನೆ ಮಾಡಿ ಸ್ವಾಗತ ಮಾಡಲಾಯಿತು.

ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೀ.ಪರಮೇಶ್ವರ್, ಈಶ್ವರ ಖಂಡ್ರೆ,ಸೇರಿದಂತೆ ಸ್ಥಳೀಯ ಶಾಸಕರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಗರದ ನೂತನ ವಿದ್ಯಾಲಯ ಆವರಣದಲ್ಲಿ ನಡೆಯಲಿರುವ ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಲು ಖಗೆ೯ ಆಗಮಿಸಿದ್ದು, ಕಾರ್ಯಕ್ರಮ ಮಧ್ಯಾಹ್ನ 2 ಗಂಟೆ ಪ್ರಾರಂಭವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!