ಅಖಿಲ ಭಾರತ್ ವಾಕ್ ಶ್ರವಣ ಸಂಸ್ಥೆಯಲ್ಲಿ ಆಡಳಿತ ಅಧಿಕಾರಿ ಮತ್ತು ವಿವಿಧ ಹುದ್ದೆಗಳ ನೇಮಕಾತಿ

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮೈಸೂರಿನಲ್ಲಿ 5 ಆಡಳಿತ ಅಧಿಕಾರಿ ಮತ್ತು ಸಹಾಯಕ
ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಡಿಪ್ಲೋಮ, ಬಿ.ಇ/ಬಿ.ಟೆಕ್, ಬಿ.ಎಸ್ಸಿ ಮತ್ತು ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರುವವರು
ಅರ್ಜಿ ಹಾಕಬಹುದು.

ಹುದ್ದೆಗಳಿಗನುಸಾರ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಗಿದ್ದು, ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಮತ್ತು ಪರಿಶಿಷ್ಟ ಜತಿ/ಪರಿಶಿಷ್ಟ ಪಂಗಡದ
ಅಭ್ಯರ್ಥಿಗಳು 40/-ರೂ ಅರ್ಜಿ ಶುಲ್ಕವನ್ನು ನೆಫ್ಟ್/ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ
ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಕಚೇರಿ ವಿಳಾಸಕ್ಕೆ ಫೆಬ್ರವರಿ 24,2023ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!