ಏರ್ ಇಂಡಿಯಾ ಮೂತ್ರ ವಿಸರ್ಜನೆ ಪ್ರಕರಣ ; ಆರೋಪಿ ಶಂಕರ್ ಮಿಶ್ರಾ ಜಾಮೀನು ಅರ್ಜಿ ವಿಚಾರಣೆ ಜನವರಿ 30ಕ್ಕೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕಳೆದ ವರ್ಷ ನವೆಂಬರ್‌ನಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ಮದ್ಯದ ಅಮಲಿನಲ್ಲಿ ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ಇತ್ತೀಚೆಗೆ ಬಂಧಿತರಾಗಿದ್ದ ಶಂಕರ್ ಮಿಶ್ರಾ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಶುಕ್ರವಾರಕ್ಕೆ ಮುಂದೂಡಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ಜ್ಯೋತ್ ಸಿಂಗ್ ಭಲ್ಲಾ ಅವರು ಜಾಮೀನು ಅರ್ಜಿಯ ಪ್ರತಿಯನ್ನು ತನಗೆ ನೀಡಿಲ್ಲ ಎಂದು ದೂರುದಾರರ ಪರ ವಾದ ಮಂಡಿಸಿದ ವಕೀಲ ಅಂಕುರ್ ಮಹೀಂದ್ರೋ ಹೇಳಿದ ನಂತರ ಪ್ರಕರಣವನ್ನು ಜನವರಿ 30ಕ್ಕೆ (ಸೋಮವಾರಕ್ಕೆ) ಮುಂದೂಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!