ಹೊಸದಿಗಂತ ವರದಿ, ಮಂಗಳೂರು
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರಿದಿದ್ದು, ಕೆಲವೆಡೆ ಇಂದು ಮಳೆ ಸುರಿದಿದೆ.
ಗುರುವಾರ ಬೆಳಿಗ್ಗೆ 8 ಗಂಟೆವರೆಗಿನ ರಾಜ್ಯದ ಹವಾಮಾನ ಮುನ್ಸೂಚನೆಯಂತೆ ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಕೂಡಾ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ ಜಿಲ್ಲೆಗಳ ಒಂದೆರಡು ಕಡೆ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದಂತೆ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ