ಅಜಿತ್ ದೋವಲ್ ಅವರ ಭದ್ರತೆಯಲ್ಲಿ ವೈಫಲ್ಯ: ಎನ್​ಎಸ್​​ಎ ಸೆಕ್ಯುರಿಟಿಯಿಂದ ಮೂವರು ಕಮಾಂಡೋಗಳ ಎತ್ತಂಗಡಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಭದ್ರತೆಯಲ್ಲಿ ವೈಫಲ್ಯ ತೋರಿದ ಆರೋಪದ ಮೇಲೆ ಮೂವರು ಕಮಾಂಡೋ ಹಾಗೂ ಒಬ್ಬ ಡಿಐಜಿಯನ್ನು ವಿಐಪಿ ಸೆಕ್ಯೂರಿಟಿಯಿಂದ ತೆಗೆದು ಹಾಕಲಾಗಿದೆ.

ಎನ್​ಎಸ್​ಎಗೆ ಭದ್ರತೆ ಒದಗಿಸುವಲ್ಲಿ ವೈಫಲ್ಯ ತೋರಿದ ಆರೋಪದ ಮೇಲೆ ವರ್ಗಾವಣೆ ಮಾಡಲಾಗಿದೆ.ಇವರು ಈ ವರ್ಷದ ಫೆಬ್ರವರಿಯಲ್ಲಿ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡಿದ್ದರಿಂದ ಈ ಕ್ರಮಕೈಗೊಳ್ಳಲಾಗಿದೆ.

2022ರ ಫೆಬ್ರವರಿಯಲ್ಲಿ ಅಜಿತ್ ದೋವಲ್ ಅವರ ನಿವಾಸದ ಆವರಣದೊಳಕ್ಕೆ ವ್ಯಕ್ತಿಯೊಬ್ಬ ಅತಿಕ್ರಮವಾಗಿ ಪ್ರವೇಶ ಮಾಡಲು ಯತ್ನಿಸಿದ್ದ. ಆತನನ್ನು ಕೊನೆಗೆ ಭದ್ರತಾ ಸಿಬ್ಬಂದಿ ತಡೆದಿದ್ದು, ನಂತರ ದೆಹಲಿ ಪೊಲೀಸರು ಆತನನ್ನು ಬಂಧಿಸಿದ್ದರು. ಆತ ಕೆಂಪು ಬಣ್ಣದ ಎಸ್​ಯುವಿ ವಾಹನದಲ್ಲಿ ಬಂದು, ದೋವಲ್ ಅವರ ದೆಹಲಿ ನಿವಾಸದ ಗೇಟ್​ ದಾಟಿ ನುಗ್ಗಲು ಯತ್ನಿಸಿದ್ದ. ಸಿಐಎಸ್​ಎಫ್​ ಯೋಧರು ಆತನನ್ನು ತಡೆದಿದ್ದರು.

ಆ ವ್ಯಕ್ತಿ ಬೆಂಗಳೂರಿನ ಶಂತನು ರೆಡ್ಡಿ ಎಂದು ಗುರುತಿಸಲಾಗಿದ್ದು, ಆತ ತನ್ನ ದೇಹದೊಳಗೆ ಚಿಪ್ ಇದ್ದು, ತನ್ನನ್ನು ಹೊರಗಿನಿಂದ ಯಾರೋ ನಿಯಂತ್ರಿಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದ. ಆದರೆ ಎಂಆರ್​ಐ ಸ್ಕ್ಯಾನ್​ಗೆ ಒಳಪಡಿಸಿದಾಗ ಯಾವುದೇ ಚಿಪ್ ಇಲ್ಲ ಎಂಬುದು ದೃಢಪಟ್ಟಿತ್ತು. ಆತ ನೋಯ್ಡಾದಲ್ಲಿ ಕಾರನ್ನು ಬಾಡಿಗೆಗೆ ಪಡೆದು ಬಂದಿದ್ದು, ಅವನು ಮಾನಸಿಕ ಸಮಸ್ಯೆ ಹೊಂದಿದ್ದ ಎನ್ನಲಾಗಿದೆ.

ದೋವಲ್​ ನಿವಾಸ ಝಡ್​ ಪ್ಲಸ್ ಕೆಟಗರಿ ಭದ್ರತೆ ನೀಡಲಾಗಿದೆ. ಈ ಘಟನೆ ನಡೆದ ಸಂದರ್ಭದಲ್ಲಿ ದೋವಲ್​ ತಮ್ಮ ನಿವಾಸದಲ್ಲೇ ಇದ್ದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!