ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಶಿರಚ್ಛೇದ ಮಾಡಿದವರಿಗೆ ತನ್ನ ಮನೆ ಉಡುಗೊರೆ ನೀಡುವುದಾಗಿ ಹೇಳಿದ್ದ ರಾಜಸ್ಥಾನದ ಅಜ್ಮೀರ್ ದರ್ಗಾದ ಧಾರ್ಮಿಕ ಮುಖಂಡ ಸಲ್ಮಾನ್ ಚಿಸ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಕ್ರಿಮಿನಲ್ ದಾಖಲೆ ಹೊಂದಿದ್ದಾನೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಸಾಮಾಜಿಕ ಜಾಲತಾಣಗಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಚಿಸ್ತಿ, ನೂಪುರ್ ಶಿರಚ್ಛೇದ ಮಾಡಿದವರಿಗೆ ತನ್ನ ಮನೆ ಉಡುಗೊರೆ ನೀಡುತ್ತೇನೆ, ಪ್ರವಾದಿ ಅವಹೇಳನ ಮಾಡಿದ್ದಕ್ಕಾಗಿ ಆಕೆಯನ್ನು ಗುಂಡಿಟ್ಟು ಸಾಯಿಸುತ್ತೇನೆ. ಈ ಸಂದೇಶವು ಹುಜೂರ್ ಖ್ವಾಜಾ ಬಾಬಾ ಕಾ ದರ್ಬಾರ್ನಿಂದ ಬಂದಿದೆ ಎಂದು ಹೇಳಿಕೊಂಡಿದ್ದ. ಈ ವಿಡಿಯೋವನ್ನು ಖಂಡಿಸಿದ್ದ ಅಜ್ಮೀರ್ ದರ್ಗಾದ ದಿವಾನ್ ಝೈನುಲ್ ಅಬೇದಿನ್ ಅಲಿ ಖಾನ್ ಅವರ ಕಚೇರಿ, ಈ ಸ್ಥಳ ಕೋಮು ಸೌಹಾರ್ದತೆಯ ಸ್ಥಳವಾಗಿದೆ ಎಂದು ಹೇಳಿತ್ತಲ್ಲದೆ ವಿಡಿಯೊದಲ್ಲಿ ಚಿಸ್ತಿ ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ದರ್ಗಾದ ಸಂದೇಶವೆಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಿತ್ತು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ