ಅಖಂಡ ಭಾರತ‌ ಸಂಕಲ್ಪ ದಿನ: ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ

ಹೊಸ ದಿಗಂತ ವರದಿ, ಮಡಿಕೇರಿ:

ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಆ.12ರಿಂದ 14ರವರೆಗೆ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮದ ನಡೆಯಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

ಆಗಸ್ಟ್ 11 ರ ಮಧ್ಯರಾತ್ರಿ 12 ಗಂಟೆಯಿಂದ ಆಗಸ್ಟ್, 13 ರ ಬೆಳಗ್ಗೆ 6 ಗಂಟೆಯವರೆಗೆ ಮಾದಾಪುರ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ, ಆಗಸ್ಟ್, 12 ರಂದು ಮಧ್ಯರಾತ್ರಿ 12 ಗಂಟೆಯಿಂದ ಆಗಸ್ಟ್, 13 ರ ಮಧ್ಯರಾತ್ರಿ 12 ಗಂಟೆಯವರೆಗೆ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಪಟ್ಟಣ ವ್ಯಾಪ್ತಿಯ ಸುತ್ತಮುತ್ತಲಿನ 10 ಕಿ.ಮೀ. ಹಾಗೂ ಆಗಸ್ಟ್, 14 ರ ಬೆಳಗ್ಗೆ 6 ಗಂಟೆಯಿಂದ
ಆ. 14 ರ ಮಧ್ಯರಾತ್ರಿ 12 ಗಂಟೆಯವರೆಗೆ ಕುಶಾಲನಗರ ಪಟ್ಟಣ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್, ರೆಸ್ಟೋರೆಂಟ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಅವರು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!