ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆ ಸಿಸಿಬಿ ಪೊಲೀಸರು ಶಂಕಿತ ಉಗ್ರ ಅಖ್ತರ್ ಹುಸೇನ್ನನ್ನು ತಿಲಕ್ನಗರದಲ್ಲಿರುವ ಬಾಡಿಗೆ ಮನೆಯಲ್ಲಿ ಬಂಧಿಸಿದ್ದು, ಈ ಮೂಲಕ ದೊಡ್ಡ ಪ್ರಮಾಣದ ಭಯೋತ್ಪಾದಕ ದಾಳಿಯ ಅತಂಕವನ್ನು ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟೆಕ್ನಿಕಲ್ ಸೆಲ್ನಲ್ಲಿ ಆತನ ವಿಚಾರಣೆ ನಡೆಯುತ್ತಿದೆ. ಇದರ ಬೆನ್ನಲ್ಲಿಯೇ ಆತನ ಉದ್ದೇಶಗಳು ಬಹಳ ಆತಂಕಕಾರಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.
ಭಯೋತ್ಪಾದಕ ಸಂಘಟನೆ ಅಲ್ಖೈದಾ ಜೊತೆ ಆತನ ಸಂಪರ್ಕವಿದ್ದು, ಹಲವು ದಿನಗಳಿಂದ ಅಂತರಿಕ ಗುಪ್ತಚರ (ಐಬಿ) ನಿಗಾ ವಹಿಸಿತ್ತು. ಆತ ಎಲ್ಲಿರುತ್ತಾನೆ ಎನ್ನುವ ಸೂಕ್ತ ಮಾಹಿತಿಯನ್ನು ಬೆಂಗಳೂರು ಪೊಲೀಸರೊಂದಿಗೆ ಹಂಚಿಕೊಂಡ ಬಳಿಕ, ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಉಗ್ರ ಅಖ್ತರ್ ಹುಸೇನ್ 10ನೇ ತರಗಿ ಓದಿದ್ದ. ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನೆ ಮಾಡುವುದು ಈತನ ಪ್ರಮುಖ ಕೆಲಸವಾಗಿತ್ತು. ಸೋಷಿಯಲ್ ಮೀಡಿಯಾ ಬಳಸಿಕೊಂಡು ಭಾರತದಲ್ಲಿ ಹಾಗೂ ಬೆಂಗಳೂರಿನಲ್ಲಿ ಗಲಭೆ ಎಬ್ಬಿಸುವ ನಿಟ್ಟಿನಲ್ಲಿ ಪೋಸ್ಟ್ಗಳನ್ನು ಮಾಡುತ್ತಿದ್ದ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಶಾಂತಿ ಹದಗೆಡಿಸೋ ಕೆಲಸ ಮಾಡುತ್ತಿದ್ದ. ಬೆಂಗಳೂರು ಮತ್ತು ಬೇರೆ ಬೇರೆ ಜಿಲ್ಲೆಯ ಮಾಹಿತಿಯನ್ನು, ಅಲ್ಲಿನ ಬೇರೆ ಬೇರೆ ಸಂಘಟನೆಯ ಜೊತೆ ಹಂಚಿಕೊಳ್ಳುತ್ತಿದ್ದ. ಅವರ ಜೊತೆ ನಿರಂತರವಾಗಿ ಸಂಪರ್ಕ ಹೊಂದಿದ್ದ ಈತ ಸೋಷಿಯಲ್ ಮೀಡಿಯಾ ಬಳಸಿಕೊಂಡು ಭಾರತದ ಮೇಲೆ ದಾಳಿ ಮಾಡುವ ಯೋಜನೆ ರೂಪಿಸಿದ್ದನು.
ಆಲ್ ಖೈದಾ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿ ಇದ್ದಿದು ಪ್ರಾಥಮಿಕ ಮಾಹಿತಿಯಲ್ಲಿ ಬಹಿರಂಗವಾಗಿದ್ದು, ಅಲ್ ಖೈದಾ ಉಗ್ರ ಸಂಘಟನೆ ಜೊತೆ ಸೇರಲು ಹವಣಿಸುತ್ತಾ ಇದ್ದ ಹುಸೇನ್ ಜಿಹಾದಿ ಆಗಬೇಕು ಎನ್ನುವ ಉದ್ದೇಶವಿತ್ತು. ಜಿಹಾದ್ ಗಾಗಿ ಪ್ರಾಣ ಬಿಡಲು ತಯಾರಾಗಿರಬೇಕು ಜಿಹಾದಿಗಳಾಗಿ ನಮ್ಮನ್ನ ನಾವು ಅರ್ಪಿಸಿಕೊಳ್ಳಬೇಕು ಎಂದು ಪ್ರಚೋದನೆ ನೀಡುತ್ತಿದ್ದನು.
ಫೇಸ್ ಬುಕ್, ವಾಟ್ಸಪ್, ಮೆಸೆಂಜರ್ ಮೂಲಕ ಉಗ್ರ ಸಂಘಟನೆ ಸಂಪರ್ಕದಲ್ಲಿ ಇದ್ದ ಅಖ್ತರ್. ದಾಳಿ ವೇಳೆ ಮೊಬೈಲ್ ನಲ್ಲಿ ಚಾಟ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯ. ಈಗಾಗಲೇ ಬಂಧಿತ ವ್ಯಕ್ತಿ ಯಾರ ಜತೆ ಸಂಪರ್ಕದಲ್ಲಿ ಇದ್ದ ಎಂಬುದರ ಬಗ್ಗೆ ಕೂಡ ಲಭ್ಯವಾಗಿದೆ.
23 ವರ್ಷದ ಹುಸೇನ್ ಅಸ್ಸಾಂ ಮೂಲದವನು. ಅಸ್ಸಾಂನಲ್ಲಿ ಈತನ ತಾಯಿ ವಾಸವಿದ್ದಾರೆ. ಕಡುಬಡತನದಲ್ಲಿದ್ದ ಈತ ಹಣಕ್ಕಾಗಿ ಜಿಹಾದ್ ಮಾಡುತ್ತಿದ್ದನು. ಬೆಳಗ್ಗೆ ಮನೆಯಲ್ಲಿಯೇ ಇರುತ್ತಿದ್ದ ಈತ ರಾತ್ರಿಯ ವೇಳೆ ಮಾತ್ರ ಫುಡ್ ಡೆಲಿವರಿಗೆ ಹೋಗ್ತಿದ್ದ. ಮನೆಯಲ್ಲಿ ಲ್ಯಾಪ್ ಟಾಪ್, ಮೊಬೈಲ್ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸರಿಗೆ ಸಿಕ್ಕಿದ್ದು ಹೇಗೆ:
ಅಲ್ಖೈದಾ ಜೊತೆ ಸಂಬಂಧ ಹೊಂದಿದ್ದ ಅಖ್ತರ್ ಹುಸೇನ್ ತನ್ನ ಮೊಬೈಲ್ ಕಾರಣದಿಂದಲೇ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಅದಲ್ಲದೆ, ಮೊಬೈಲ್ ಮೂಲಕವೇ ಈತ ಅಲ್ಖೈದಾ ಜೊತೆ ಸಂಬಂಧವಿರುವುದು ದೃಢಪಟ್ಟಿದೆ.
ಕಳೆದ ಮೂರು ತಿಂಗಳಿನಿಂದ ಗುಪ್ತಚರ ಇಲಾಖೆ ಈತನ ಚಲನವಲನದ ಮೇಲೆ ನಿಗಾ ಇರಿಸಿತ್ತು. ಅಲ್ಖೈದಾಗೆ ಸಂಬಂಧಪಟ್ಟ ವ್ಯಕ್ತಿಗಳಿಗೆ ನಿರಂತರ ಮೆಸೇಜ್ಗಳನ್ನೂ ಮಾಡಿದ್ದ. ಅಲ್ ಖೈದಾ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳಿಗೆ ಮೇಸೆಜ್ ಮಾಡಿದ್ದನು. ಬೆಂಗಳೂರಿನಲ್ಲಿ ಅಹಿತಕರ ಘಟನೆಗಳು ನಡೆಸುವ ಬಗ್ಗೆ, ಅದನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಪ್ಲ್ಯಾನ್ ಮಾಡುತ್ತಿದ್ದನು. ಅಲ್ ಖೈದಾ ಸಂಘಟನೆ ಜೊತೆ ಸಂಪರ್ಕ ಹೊಂದಿರೋ ಬಗ್ಗೆ ಧೃಡವಾದ ಬಳಿಕ ಬಂಧನ ಮಾಡಿದ ಸಿಸಿಬಿ ಹಾಗೂ ಐಬಿ ಬಂಧನ ಮಾಡಿದೆ.