ಕಾಲುವೆ ಒಡೆದು ಜಮೀನಿಗೆ ನುಗ್ಗಿದ ನೀರು: ಕಂಗಾಲಾದ ರೈತರು

ಹೊಸದಿಗಂತ ವರದಿ ವಿಜಯಪುರ:

ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಜಮೀನಿಗೆ ನುಗ್ಗಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹರಿಂದ್ರಾಳ ಗ್ರಾಮದ ಬಳಿ ನಡೆದಿದೆ.

ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ ಒಡೆದಿದೆ. ಹೀಗಾಗಿ ರೈತರಿಗೆ ಸೇರಿದ್ದ ನೂರಾರು ಎಕರೆ ಜಮೀನಿಗೆ ನೀರು ನುಗ್ಗಿದ್ದು, ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳಿಗೆ ಸಂಪೂರ್ಣ ಹಾನಿಯಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕೆಬಿಜೆಎನ್ಎಲ್ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಲುವೆ ಒಡೆದ ಸ್ಥಳದಲ್ಲಿ ಜೆಸಿಬಿ ಮೂಲಕ ಮಣ್ಣು ಹಾಕಿ ಮುಚ್ಚಲು ಯತ್ನಿಸಿದ್ದಾರೆ.

ಒಡೆದ ಕಾಲುವೆಯನ್ನು ದುರಸ್ಥಿ ಮಾಡುವಂತೆ ಹಾಗೂ ಜಮೀನಿಗೆ ನೀರು ನುಗ್ಗಿ ಹಾಳಾದ ಬೆಳೆಗಳಿಗೆ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!